<p>ಬಿಯಾಂಡ್ ವಿಷನ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ತನುಜಾ’ ಸಿನಿಮಾದ ಫಸ್ಟ್ಲುಕ್ ಅನ್ನು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವ ಸುಧಾಕರ್ ಹಾಗೂ ಪತ್ರಕರ್ತ ವಿಶ್ವೇಶ್ವರ್ ಭಟ್ ಉಪಸ್ಥಿತರಿದ್ದರು.</p>.<p>ವಿಶ್ವೇಶ್ವರ ಭಟ್ ಅವರ ಲೇಖನವೊಂದರಿಂದ ಪ್ರಭಾವಿತರಾಗಿ ಹರೀಶ್ ಎಂ.ಡಿ. ಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.</p>.<p>ನೈಜಘಟನೆ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮಾರ್ಚ್ ಎರಡನೇ ವಾರದಿಂದ ಆರಂಭವಾಗಲಿದೆ. ಬೆಂಗಳೂರು, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 2016–17 ಸಾಲಿನ ರಾಜ್ಯಪ್ರಶಸ್ತಿಗೆ ಭಾಜನವಾಗಿದ್ದ ‘ಅಂತರ್ಜಲ’ ಚಿತ್ರವನ್ನು ನಿರ್ದೇಶಿಸಿದ್ದ ಹರೀಶ್ ಎಂ.ಡಿ. ಹಳ್ಳಿ ಅವರಿಗೆ ಇದು ಎರಡನೇ ಚಿತ್ರ.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.</p>.<p>ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣವಿರುವ ‘ತನುಜಾ’ ಚಿತ್ರಕ್ಕೆ ಆರ್. ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಯಾಂಡ್ ವಿಷನ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ತನುಜಾ’ ಸಿನಿಮಾದ ಫಸ್ಟ್ಲುಕ್ ಅನ್ನು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವ ಸುಧಾಕರ್ ಹಾಗೂ ಪತ್ರಕರ್ತ ವಿಶ್ವೇಶ್ವರ್ ಭಟ್ ಉಪಸ್ಥಿತರಿದ್ದರು.</p>.<p>ವಿಶ್ವೇಶ್ವರ ಭಟ್ ಅವರ ಲೇಖನವೊಂದರಿಂದ ಪ್ರಭಾವಿತರಾಗಿ ಹರೀಶ್ ಎಂ.ಡಿ. ಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.</p>.<p>ನೈಜಘಟನೆ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮಾರ್ಚ್ ಎರಡನೇ ವಾರದಿಂದ ಆರಂಭವಾಗಲಿದೆ. ಬೆಂಗಳೂರು, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 2016–17 ಸಾಲಿನ ರಾಜ್ಯಪ್ರಶಸ್ತಿಗೆ ಭಾಜನವಾಗಿದ್ದ ‘ಅಂತರ್ಜಲ’ ಚಿತ್ರವನ್ನು ನಿರ್ದೇಶಿಸಿದ್ದ ಹರೀಶ್ ಎಂ.ಡಿ. ಹಳ್ಳಿ ಅವರಿಗೆ ಇದು ಎರಡನೇ ಚಿತ್ರ.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.</p>.<p>ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣವಿರುವ ‘ತನುಜಾ’ ಚಿತ್ರಕ್ಕೆ ಆರ್. ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>