ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಿಂದ ಕೊಡಗಿಗೆ ಬಂದಿದ್ದ ಅಭಿಮಾನಿ: ಅಭಿಮಾನ ಮನೆವರೆಗೂ ಬೇಡ –ರಶ್ಮಿಕಾ

Last Updated 27 ಜೂನ್ 2021, 12:28 IST
ಅಕ್ಷರ ಗಾತ್ರ

ಕನ್ನಡತಿ, ಕೊಡಗಿನ ಕಣ್ಮಣಿ ನಟಿ ರಶ್ಮಿಕಾ ಮಂದಣ್ಣ ಕನ್ನಡ ಸೇರಿದಂತೆ ತೆಲುಗು, ತಮಿಳಿನಲ್ಲಿ ಸಾಕಷ್ಟು ಅಭಿಮಾನಿಗಳು ಹೊಂದಿದ್ದಾರೆ. ಬಹು ಬೇಡಿಕೆ ನಟಿಯಾಗಿರುವರಶ್ಮಿಕಾ ಸದ್ಯ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚಿಗೆ ತೆಲಂಗಾಣ ರಾಜ್ಯದಿಂದ ಆಕಾಶ್ ತ್ರಿಪಾಠಿ ಎಂಬ ಅಭಿಮಾನಿ ರಶ್ಮಿಕಾ ಅವರನ್ನು ಹುಡುಕಿಕೊಂಡು ಕೊಡಗಿನ ವಿರಾಜಪೇಟೆಗೆ ಬಂದಿದ್ದರು. ಆದರೆ ಅಲ್ಲಿ ರಶ್ಮಿಕಾ ಸಿಗಲಿಲ್ಲ. ಕೊನೆಗೆ ಪೊಲೀಸರುಆ ಅಭಿಮಾನಿಗೆ ಬುದ್ದಿ ಹೇಳಿ ವಾಪಸ್ಸು ಕಳುಹಿಸಿದ್ದರು.

ಈ ಸುದ್ದಿ ಮಾಧ್ಯಮಗಳಲ್ಲಿ ಸದ್ದು ಮಾಡಿತ್ತು. ಇದನ್ನು ತಿಳಿದ ರಶ್ಮಿಕಾ,ಅಭಿಮಾನಿಗಳೇ ಹುಡುಕಿಕೊಂಡು ಮನೆವರೆಗೂ ಬರಬೇಡಿ ಎಂದು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

‘ಗೆಳೆಯರೇ ನಿಮ್ಮಲ್ಲಿ ಯಾರೋ ಒಬ್ಬರು ನನ್ನನ್ನು ಹುಡುಕಿಕೊಂಡು ತುಂಬ ದೂರ ಪ್ರಯಾಣಿಸಿ ನಮ್ಮ ಮನೆವರೆಗೂ ಹೋಗಿದ್ದೀರಿ ಎಂಬುದು ತಿಳಿಯಿತು. ದಯವಿಟ್ಟು ಹೀಗೆಲ್ಲಾ ಮಾಡಬೇಡಿ. ನಿಮ್ಮನ್ನು ಭೇಟಿ ಆಗಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ನನಗೆ ಬೇಸರವಾಗಿತ್ತಿದೆ. ನೀವು ಖಂಡಿತಾ ಒಂದು ದಿನ ಭೇಟಿ ಆಗುತ್ತೀರಿ ಎಂಬ ನಂಬಿಕೆ ನನಗಿದೆ. ಸದ್ಯಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿ ತೋರಿಸಿ. ನಾನು ಖುಷಿಯಾಗಿರುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT