ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ಗೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಜರಂಗಿ 2' ಶುಕ್ರವಾರ ಬಿಡುಗಡೆಯಾಗಲಿದೆ.
ಈ ಸಂದರ್ಭದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಭಜರಂಗಿ–2 ಚಿತ್ರಕ್ಕೆ ಶುಭ ಕೋರಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ’ವರುಡು ಕಾವಲೇನು’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲು ಅರ್ಜುನ್ ಮಾತನಾಡಿದರು. ಕರ್ನಾಟಕದಲ್ಲಿ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ–2 ಸಿನಿಮಾ ಬಿಡುಗಡೆಯಾಗುತ್ತಿದ್ದು ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.
ಭಜರಂಗಿ–2 ಸಿನಿಮಾ ನಾಳೆ (ಅ.29) ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಈಗಾಲೇ ಪೋಸ್ಟರ್ಗಳು ಹಾಗೂ ಟ್ರೈಲರ್ ಮೂಲಕ ಸಿನಿಮಾ ಭಾರೀ ನೀರಿಕ್ಷೆ ಮೂಡಿಸಿದೆ.
ಎ. ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ನಾಯಕನ ಪಾತ್ರದಲ್ಲಿ ಶಿವರಾಜ್ಕುಮಾರ್ ಅಭಿನಯಿಸಿದ್ದರೆ, ಭಾವನ ಮೆನನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಭಜರಂಗಿ 1 ರಲ್ಲಿ ಮೋಡಿ ಮಾಡಿದ್ದ ಭಜರಂಗಿ ಲೋಕಿ ಖಳಪಾತ್ರದಲ್ಲಿ ಆರ್ಭಟಿಸಲಿದ್ದಾರೆ.