ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 ವಿರುದ್ಧ ಹೋರಾಡಲು ಪ್ರಭಾಸ್‌ ₹ 4 ಕೋಟಿ ದೇಣಿಗೆ

Last Updated 27 ಮಾರ್ಚ್ 2020, 14:14 IST
ಅಕ್ಷರ ಗಾತ್ರ

ಹೈದರಾಬಾದ್‌: ದೇಶದಲ್ಲಿ ಮಹಾಮಾರಿಯಾಗಿ ಹಬ್ಬುತ್ತಿರುವ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಬಾಹುಬಲಿ ಖ್ಯಾತಿಯ ನಟ ಪ್ರಭಾಸ್‌ ₹ 4 ಕೋಟಿ ದೇಣಿಗೆ ನೀಡಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ₹ 3 ಕೋಟಿ ಹಾಗೂ ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹ 50 ಲಕ್ಷ ದೇಣಿಗೆ ನೀಡಿದ್ದಾರೆ.

ಪ್ರಭಾಸ್‌ ಇತ್ತೀಚೆಗೆ ಜಾರ್ಜಿಯಾದಿಂದ ಮರಳಿದ್ದಾರೆ. ಬಂದ ತಕ್ಷಣವೇ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ದೇಣಿಗೆ ನೀಡಿದ್ದಾರೆ. ಕಳೆದ 6 ದಿನಗಳಿಂದ ಪ್ರಭಾಸ್ ಸ್ವಯಂಪ್ರತ್ಯೇಕವಾಗಿದ್ದಾರೆ.

ಇನ್ನು ಹೆಸರಿಡದ ಚಿತ್ರದಲ್ಲಿ ಪ್ರಭಾಸ್‌ ನಟಿಸುತ್ತಿದ್ದು, ಪೂಜಾ ಹೆಗ್ಡೆ ಪ್ರಭಾಸ್‌ಗೆ ನಾಯಕಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಜಾರ್ಜಿಯದಲ್ಲಿ ನಡೆಯುತ್ತಿತ್ತು. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

ದೇಶದಲ್ಲಿ ಕೊರೊನಾ ವೈರಸ್ಪೀಡಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದ್ದು 20 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT