ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ₹ 3 ಕೋಟಿ ಹಾಗೂ ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹ 50 ಲಕ್ಷ ದೇಣಿಗೆ ನೀಡಿದ್ದಾರೆ.
ಪ್ರಭಾಸ್ ಇತ್ತೀಚೆಗೆ ಜಾರ್ಜಿಯಾದಿಂದ ಮರಳಿದ್ದಾರೆ. ಬಂದ ತಕ್ಷಣವೇ ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಣಿಗೆ ನೀಡಿದ್ದಾರೆ. ಕಳೆದ 6 ದಿನಗಳಿಂದ ಪ್ರಭಾಸ್ ಸ್ವಯಂಪ್ರತ್ಯೇಕವಾಗಿದ್ದಾರೆ.
ಇನ್ನು ಹೆಸರಿಡದ ಚಿತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಪೂಜಾ ಹೆಗ್ಡೆ ಪ್ರಭಾಸ್ಗೆ ನಾಯಕಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಜಾರ್ಜಿಯದಲ್ಲಿ ನಡೆಯುತ್ತಿತ್ತು. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.
ದೇಶದಲ್ಲಿ ಕೊರೊನಾ ವೈರಸ್ಪೀಡಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದ್ದು 20 ಜನರು ಮೃತಪಟ್ಟಿದ್ದಾರೆ.