ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶರ್ಮಿಳಾ ಅವರು ಪತ್ರ ಬರೆದಿದ್ದಾರೆ. ‘ಶರ್ಮಿಳಾ ಮಾಂಡ್ರೆ ಪ್ರೊಡಕ್ಷನ್ಸ್ನಡಿ ನಿರ್ಮಾಣಗೊಳ್ಳುತ್ತಿರುವ, ಸತೀಶ್ ನೀನಾಸಂ ನಾಯಕರಾಗಿ ನಟಿಸುತ್ತಿರುವ ನನ್ನ ಮೊದಲ ಸಿನಿಮಾದ ಶೀರ್ಷಿಕೆಯನ್ನು(ದಸರಾ) 2020ರ ಸೆ.30ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದೆ. ನಮ್ಮ ಈ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಎಸ್ಎಲ್ವಿ ಬ್ಯಾನರ್ನಡಿ ತೆಲುಗು ನಿರ್ಮಾಪಕರಾದ ಸುಧಾಕರ್ ಚೆರುಕುರಿ ಅವರು ‘ದಸರಾ’ ಎಂಬ ಶೀರ್ಷಿಕೆಯಲ್ಲೇ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾದ ಟೀಸರ್ ಹಾಗೂ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಇದರಿಂದ ನಮಗೆ ಸಮಸ್ಯೆಯಾಗಿದೆ. ಈಗಾಗಲೇ ನಾವು ಹಲವು ವೇದಿಕೆಗಳಲ್ಲಿ ನಮ್ಮ ಸಿನಿಮಾ ಶೀರ್ಷಿಕೆಯನ್ನು ಹಂಚಿಕೊಂಡಿದ್ದು, ತೆಲುಗು ನಿರ್ಮಾಪಕರ ಈ ನಡೆಯಿಂದ ನಮಗೆ ತೊಂದರೆಯಾಗಿದೆ. ಇದರಿಂದ ನಮ್ಮ ಚಿತ್ರದ ಗಳಿಕೆಗೂ ಸಮಸ್ಯೆಯಾಗಲಿದ್ದು, ಕನಿಷ್ಠ ಕನ್ನಡ ಅವತರಣಿಕೆಯಲ್ಲಿ ‘ದಸರಾ’ ಶೀರ್ಷಿಕೆ ಬಳಸದಂತೆ ತಡೆಯಬೇಕು’ ಎಂದು ಶರ್ಮಿಳಾ ಮಾಂಡ್ರೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.