ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗು ನಿರ್ಮಾಪಕ ಬೆಲ್ಲಂಕೊಂಡ ಸುರೇಶ್‌ ವಿರುದ್ಧ ವಂಚನೆ ಪ್ರಕರಣ

Last Updated 12 ಮಾರ್ಚ್ 2022, 8:24 IST
ಅಕ್ಷರ ಗಾತ್ರ

ಟಾಲಿವುಡ್ ಸ್ಟಾರ್‌ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅವರ ತಂದೆ ಬೆಲ್ಲಂಕೊಂಡ ಸುರೇಶ್‌ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ನಿರ್ಮಾಪಕ ಸುರೇಶ್‌ ಅವರು ಟಾಲಿವುಡ್‌ನಲ್ಲಿ ಎರಡು ದಶಕಗಳಿಂದ ಸಕ್ರಿಯರಾಗಿದ್ದು ಹಲವು ಹಿಟ್‌ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಅವರವಿರುದ್ಧ ಶ್ರವಣ್‌ ಕುಮಾರ್‌ ಎಂಬುವರು ದೂರು ದಾಖಲು ಮಾಡಿದ್ದಾರೆ.

2018ರಲ್ಲಿ ಸುರೇಶ್‌ ಅವರು ₹ 85 ಲಕ್ಷ ಸಾಲ ಪಡೆದು ಇದುವರೆಗೂ ಮರಳಿಸಿಲ್ಲ ಎಂದು ಶ್ರಮಣ್‌ ಕುಮಾರ್‌ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪೋಲಿಸರಿಗೆ ನೀಡಿದ್ದಾರೆ.

ಈ ಘಟನೆ ಸಂಬಂಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ಟಾಲಿವುಡ್‌ ಮಾಧ್ಯಮಗಳು ವರದಿ ಮಾಡಿವೆ. ಆದರೆ ಸುರೇಶ್‌ ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಪ್ಡೇಟ್‌ ನೀಡಿಲ್ಲ.

ಸದ್ಯ ಸುರೇಶ್‌ ಅವರು ತೆಲುಗಿನ ಹಿಟ್‌ ಚಿತ್ರ ’ಛತ್ರಪತಿ‘ ಸಿನಿಮಾವನ್ನು ಹಿಂದಿಗೆ ರಿಮೇಕ್‌ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT