ಸ್ನೇಹಿತರೊಂದಿಗೆ ಕಾರಿನಲ್ಲಿ ಮದ್ಯದ ಪಾರ್ಟಿ ಮಾಡಿದ್ದ ಆರೋಪಿ, ಕೈಯಲ್ಲಿ ಬಿಯರ್ ಬಾಟಲಿ ಹಿಡಿದಿರುವ ಫೋಟೊವೊಂದನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದ. ಅದರ ಜೊತೆ ‘ರಾಜ್ಕುಮಾರ್ನಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೀವು ನೆನಪಿನಲ್ಲಿ ಇಟ್ಟುಕೊಳ್ಳಿ. ದಯವಿಟ್ಟು ಮರೆಯಬೇಡಿ. ನಾವು ಇದನ್ನು ಕುಡಿದ ನಂತರ ಆತನ ಸಮಾಧಿಯ ಮೇಲೆ ಮೂತ್ರ ವಿಸರ್ಜಿಸುತ್ತೇವೆ’ ಎಂದು ಬರೆದಿದ್ದ. ಇದರ ಸ್ಕ್ರೀನ್ಶಾಟ್ ತೆಗೆದಿದ್ದ ವ್ಯಕ್ತಿಯೊಬ್ಬರು ಅದನ್ನು ಅಕ್ಟೋಬರ್ 31ರಂದು ಟ್ವೀಟ್ ಮಾಡಿದ್ದರು. ಅದನ್ನು ಪೊಲೀಸ್ ಕಮಿಷನರ್ ಕಮಲ್ ಪಂತ್, ಸೈಬರ್ ಅಪರಾಧ ದಳ ಹಾಗೂ ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು.