<p><strong>ಬೆಂಗಳೂರು</strong>: ಬೆಂಗಳೂರಿನ 12ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಕನ್ನಡದಲ್ಲಿ ವರ್ಷದಿಂದ ವರ್ಷಕ್ಕೆ ಚಿತ್ರಗಳ ಸಂಖ್ಯೆ ಹೆಚ್ಚುತ್ತಿವೆ. ಆದರೆ, ಚಿತ್ರಗಳಲ್ಲಿ ಗುಣಮಟ್ಟ ಸುಧಾರಣೆಯಾಗಬೇಕಿದೆ’ ಎಂದರು.</p>.<p>ಉದ್ಘಾಟನಾ ಸಿನಿಮಾವಾಗಿ ಇರಾನಿನ ಪರ್ಷಿಯನ್ ಭಾಷೆಯ ‘ಸಿನಿಮಾ ಖಾರ್’ ( ಸಿನಿಮಾ ಡಾಂಕಿ) (ನಿರ್ದೇಶನ: ಶಾಹೆದ ಅಹ್ಮದ್ ಲೂ) ಚಿತ್ರವನ್ನು ಪ್ರದರ್ಶಿಸಲಾಯಿತು.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮಾತನಾಡಿ, ‘ಅಕಾಡೆಮಿಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ನೀಡಿದೆ. ಈ ಹಣವನ್ನು ಸದ್ವಿನಿಯೋಗ ಮಾಡುತ್ತೇವೆ’ ಎಂದು ಹೇಳಿದರು.</p>.<p><strong>ಫಿಲಂ ಸಿಟಿಗೆ ಬೇಡಿಕೆ:</strong> ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ನಟ ಯಶ್, ರಾಜ್ಯದಲ್ಲಿ ಸುಸಜ್ಜಿತವಾದ ಫಿಲಂ ಸಿಟಿ ನಿರ್ಮಿಸುವಂತೆ ಮುಖ್ಯಮಂತ್ರಿ ಎದುರು ಬೇಡಿಕೆ ಇಟ್ಟರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ ಸಿನಿಮೋತ್ಸವದ ಬಗ್ಗೆ<br />ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಇಲಾಖಾ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜಯರಾಜ್, ಸಿನಿಮೋತ್ಸವದ ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರಿನ 12ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಕನ್ನಡದಲ್ಲಿ ವರ್ಷದಿಂದ ವರ್ಷಕ್ಕೆ ಚಿತ್ರಗಳ ಸಂಖ್ಯೆ ಹೆಚ್ಚುತ್ತಿವೆ. ಆದರೆ, ಚಿತ್ರಗಳಲ್ಲಿ ಗುಣಮಟ್ಟ ಸುಧಾರಣೆಯಾಗಬೇಕಿದೆ’ ಎಂದರು.</p>.<p>ಉದ್ಘಾಟನಾ ಸಿನಿಮಾವಾಗಿ ಇರಾನಿನ ಪರ್ಷಿಯನ್ ಭಾಷೆಯ ‘ಸಿನಿಮಾ ಖಾರ್’ ( ಸಿನಿಮಾ ಡಾಂಕಿ) (ನಿರ್ದೇಶನ: ಶಾಹೆದ ಅಹ್ಮದ್ ಲೂ) ಚಿತ್ರವನ್ನು ಪ್ರದರ್ಶಿಸಲಾಯಿತು.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮಾತನಾಡಿ, ‘ಅಕಾಡೆಮಿಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ನೀಡಿದೆ. ಈ ಹಣವನ್ನು ಸದ್ವಿನಿಯೋಗ ಮಾಡುತ್ತೇವೆ’ ಎಂದು ಹೇಳಿದರು.</p>.<p><strong>ಫಿಲಂ ಸಿಟಿಗೆ ಬೇಡಿಕೆ:</strong> ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ನಟ ಯಶ್, ರಾಜ್ಯದಲ್ಲಿ ಸುಸಜ್ಜಿತವಾದ ಫಿಲಂ ಸಿಟಿ ನಿರ್ಮಿಸುವಂತೆ ಮುಖ್ಯಮಂತ್ರಿ ಎದುರು ಬೇಡಿಕೆ ಇಟ್ಟರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ ಸಿನಿಮೋತ್ಸವದ ಬಗ್ಗೆ<br />ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಇಲಾಖಾ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜಯರಾಜ್, ಸಿನಿಮೋತ್ಸವದ ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>