<p>2023ರಲ್ಲಿ ತೆರೆಕಂಡ 'ದಿ ಕೇರಳ ಸ್ಟೋರಿ' ವಿವಾದಗಳ ನಡುವೆಯೂ ಬಾಕ್ಸಾಫೀಸ್ನಲ್ಲಿ ಅಬ್ಬರಿಸಿತ್ತು. ಅದರ -ಮುಂದುವರಿದ ಭಾಗ 'ದಿ ಬಿಯಾಂಡ್ ದಿ ಕೇರಳ ಸ್ಟೋರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. </p><p>ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರವನ್ನು ಸನ್ಶೈನ್ ಪಿಕ್ಚರ್ಸ್ ಬ್ಯಾನರ್ ಅಡಿ ವಿಪುಲ್ ಅಮೃತ ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. </p><p>ಟ್ರೇಲರ್ನಲ್ಲಿ ‘ಮೂವರು ಯುವತಿಯರು ಪ್ರೀತಿಯಲ್ಲಿ ಬಿದ್ದು ಮೋಸ ಹೋಗುತ್ತಾರೆ. ಬಳಿಕ ಆ ಯುವತಿಯರನ್ನು ಬಲವಂತವಾಗಿ ಲವ್ ಜಿಹಾದ್ಗೆ ಒಳಪಡಿಸುವುದನ್ನು ನೋಡಬಹುದು. ಈ ಚಿತ್ರದ ಮೊದಲಿನ ಭಾಗದಂತೆ ಎರಡನೇ ಭಾಗದಲ್ಲೂ ಮತಾಂತರದ ವಿಷಯವನ್ನು ಎತ್ತಿ ಹಿಡಿಯಲಾಗಿದೆ.</p>.‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಬಿಡುಗಡೆ: ಪ್ರೇಕ್ಷಕರ ಮೆಚ್ಚುಗೆ.ಪ್ರಕೃತಿ ಎದುರು ಮನದ ಇಂಗಿತ ಹಂಚಿಕೊಂಡ ನಟಿ ಸೋನು ಗೌಡ.<p>'ದಿ ಕೇರಳ ಸ್ಟೋರಿ' ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಿಡಿಕಾರಿದ್ದಾರೆ. ‘ಈ ಚಿತ್ರವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಹಾಗೂ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಮಾಡಲಾಗಿದೆ ಇಂತಹ ಚಿತ್ರಕಥೆಗಳನ್ನು ಸ್ವೀಕರಿಸಬಾರದು' ಎಂದಿದ್ದಾರೆ.<br><br>'ದಿ ಬಿಯಾಂಡ್ ದಿ ಕೇರಳ ಸ್ಟೋರಿ'ವು ಫೆ.27ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>2023ರಲ್ಲಿ ತೆರೆಕಂಡ 'ದಿ ಕೇರಳ ಸ್ಟೋರಿ' ವಿವಾದಗಳ ನಡುವೆಯೂ ಬಾಕ್ಸಾಫೀಸ್ನಲ್ಲಿ ಅಬ್ಬರಿಸಿತ್ತು. ಅದರ -ಮುಂದುವರಿದ ಭಾಗ 'ದಿ ಬಿಯಾಂಡ್ ದಿ ಕೇರಳ ಸ್ಟೋರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. </p><p>ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರವನ್ನು ಸನ್ಶೈನ್ ಪಿಕ್ಚರ್ಸ್ ಬ್ಯಾನರ್ ಅಡಿ ವಿಪುಲ್ ಅಮೃತ ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. </p><p>ಟ್ರೇಲರ್ನಲ್ಲಿ ‘ಮೂವರು ಯುವತಿಯರು ಪ್ರೀತಿಯಲ್ಲಿ ಬಿದ್ದು ಮೋಸ ಹೋಗುತ್ತಾರೆ. ಬಳಿಕ ಆ ಯುವತಿಯರನ್ನು ಬಲವಂತವಾಗಿ ಲವ್ ಜಿಹಾದ್ಗೆ ಒಳಪಡಿಸುವುದನ್ನು ನೋಡಬಹುದು. ಈ ಚಿತ್ರದ ಮೊದಲಿನ ಭಾಗದಂತೆ ಎರಡನೇ ಭಾಗದಲ್ಲೂ ಮತಾಂತರದ ವಿಷಯವನ್ನು ಎತ್ತಿ ಹಿಡಿಯಲಾಗಿದೆ.</p>.‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಬಿಡುಗಡೆ: ಪ್ರೇಕ್ಷಕರ ಮೆಚ್ಚುಗೆ.ಪ್ರಕೃತಿ ಎದುರು ಮನದ ಇಂಗಿತ ಹಂಚಿಕೊಂಡ ನಟಿ ಸೋನು ಗೌಡ.<p>'ದಿ ಕೇರಳ ಸ್ಟೋರಿ' ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಿಡಿಕಾರಿದ್ದಾರೆ. ‘ಈ ಚಿತ್ರವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಹಾಗೂ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಮಾಡಲಾಗಿದೆ ಇಂತಹ ಚಿತ್ರಕಥೆಗಳನ್ನು ಸ್ವೀಕರಿಸಬಾರದು' ಎಂದಿದ್ದಾರೆ.<br><br>'ದಿ ಬಿಯಾಂಡ್ ದಿ ಕೇರಳ ಸ್ಟೋರಿ'ವು ಫೆ.27ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>