ಬೆಂಗಳೂರು: ವಿವಾದಿತ ಹೇಳಿಕೆಗೆ ಹೆಸರುವಾಸಿಯಾಗಿರುವ 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.
ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಅಗ್ನಿಹೋತ್ರಿ ನೀಡಿರುವ ಹೇಳಿಕೆಯ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
‘ಎಲ್ಲಿ ಉತ್ತಮ ಗೋಮಾಂಸ ಸಿಗುವುದೆಂದು ಹಿಂದೆ ಬರೆದಿದ್ದೆ. ನಾನು ಅದನ್ನು ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ. ನನ್ನ ಬದುಕಲ್ಲಿ ಏನೂ ಬದಲಾಗಿಲ್ಲ’ ಎಂದು ವಿವೇಕ್ ಅಗ್ನಿಹೋತ್ರಿ ವಿಡಿಯೊದಲ್ಲಿ ಹೇಳಿದ್ದಾರೆ. ಇದು ಹಳೆಯ ವಿಡಿಯೊ ಎನ್ನಲಾಗಿದೆ.
ನಟ ರಣಬೀರ್ ಕಪೂರ್ ಅವರು ಗೋಮಾಂಸ ಸೇವಿಸುವುದರ ಬಗೆಗಿನ ವಿಡಿಯೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕಪೂರ್ ನಟನೆಯ ಬ್ರಹ್ಮಾಸ್ತ್ರ ಚಿತ್ರವನ್ನು ಬಹಿಷ್ಕರಿಸಬೇಕೆಂದು ಕರೆ ನೀಡಲಾಗಿತ್ತು.
ಬ್ರಹ್ಮಾಸ್ತ್ರ ಚಿತ್ರವನ್ನು ಟೀಕಿಸಿದ್ದ ಅಗ್ನಿಹೋತ್ರಿ ವಿಡಿಯೊ ಈಗ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
They will never show you this video of @/vivekagnihotri who is a #beef eater too, and that's his personal choice.
But it won't fit their narrative and agenda, But You guys stay away from those guys and keep booking tickets and enjoy #Brahmastra in theatres pic.twitter.com/5SCZG9IHYa