ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಪ್ರಕಾಶ್ ಬೆಳವಾಡಿ ಮತ್ತು ದರ್ಶನ್ ಕುಮಾರ್ ಮುಂತಾದ ದಿಗ್ಗಜರೇ ನಟಿಸಿದ್ದ ಈ ಸಿನಿಮಾವು 1991ರಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಕಟ್ಟಿಕೊಟ್ಟಿತ್ತು. ಈ ಸಿನಿಮಾ, ಚಿತ್ರಮಂದಿರಗಳಲ್ಲಿ ಕೇವಲ ಹಿಂದಿ ಭಾಷೆಯಲ್ಲಿ ತೆರೆಕಂಡಿತ್ತು. ಆದರೆ ಜೀ5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ಈ ಚಿತ್ರವು ಪ್ರಸಾರವಾಗಲಿದೆ. ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿರಲಿದೆ.