<p><strong>ಬೆಂಗಳೂರು:</strong> ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ತಂಡ ರಂಜಾನ್ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ.</p>.<p>ರಾಬರ್ಟ್ ಚಿತ್ರ ತಂಡ ಹೊಸ ಫೋಸ್ಟರ್ಬಿಡುಗಡೆ ಮಾಡುವ ಮೂಲಕಮುಸ್ಲಿಂ ಭಾಂದವರಿಗೆ ಈದ್ ಮುಬಾರಕ್ ತಿಳಿಸಿದೆ.</p>.<p>ಬಿಡುಗಡೆಯಾಗಿರುವ ಹೊಸ ಫೋಸ್ಟರ್ನಲ್ಲಿ ದರ್ಶನ್ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ದಚ್ಚು ಅಭಿಮಾನಿಗಳು ಈಫೋಸ್ಟರ್ಗೆ ಫಿದಾಆಗಿದ್ದಾರೆ. ಈಗಾಗಲೇ ಫೋಸ್ಟರ್ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>‘ರಾಬರ್ಟ್’ ದರ್ಶನ್ ನಟನೆಯ 53ನೇ ಚಿತ್ರ. ಇದಕ್ಕೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಾಬರ್ಟ್ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂಬ ಸುಳಿವನ್ನುಚಿತ್ರತಂಡ ನೀಡಿದೆ.</p>.<p>‘ರಾಬರ್ಟ್’ ಸಿನಿಮಾದ ಪೋಸ್ಟರ್ಗಳು, ಟೀಸರ್ಗಳು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿವೆ.<br />ಭದ್ರಾವತಿ ಮೂಲದ ಕನ್ನಡತಿ ಆಶಾ ಭಟ್ ನಾಯಕಿಯಾಗಿದ್ದಾರೆ. ತೆಲುಗಿನ ಖ್ಯಾತ ಖಳನಟ ಜಗಪತಿಬಾಬು, ವಿನೋದ್ ಪ್ರಭಾಕರ್ ಬಣ್ಣ ಹಚ್ಚಿದ್ದಾರೆ. ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ತಂಡ ರಂಜಾನ್ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ.</p>.<p>ರಾಬರ್ಟ್ ಚಿತ್ರ ತಂಡ ಹೊಸ ಫೋಸ್ಟರ್ಬಿಡುಗಡೆ ಮಾಡುವ ಮೂಲಕಮುಸ್ಲಿಂ ಭಾಂದವರಿಗೆ ಈದ್ ಮುಬಾರಕ್ ತಿಳಿಸಿದೆ.</p>.<p>ಬಿಡುಗಡೆಯಾಗಿರುವ ಹೊಸ ಫೋಸ್ಟರ್ನಲ್ಲಿ ದರ್ಶನ್ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ದಚ್ಚು ಅಭಿಮಾನಿಗಳು ಈಫೋಸ್ಟರ್ಗೆ ಫಿದಾಆಗಿದ್ದಾರೆ. ಈಗಾಗಲೇ ಫೋಸ್ಟರ್ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>‘ರಾಬರ್ಟ್’ ದರ್ಶನ್ ನಟನೆಯ 53ನೇ ಚಿತ್ರ. ಇದಕ್ಕೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಾಬರ್ಟ್ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂಬ ಸುಳಿವನ್ನುಚಿತ್ರತಂಡ ನೀಡಿದೆ.</p>.<p>‘ರಾಬರ್ಟ್’ ಸಿನಿಮಾದ ಪೋಸ್ಟರ್ಗಳು, ಟೀಸರ್ಗಳು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿವೆ.<br />ಭದ್ರಾವತಿ ಮೂಲದ ಕನ್ನಡತಿ ಆಶಾ ಭಟ್ ನಾಯಕಿಯಾಗಿದ್ದಾರೆ. ತೆಲುಗಿನ ಖ್ಯಾತ ಖಳನಟ ಜಗಪತಿಬಾಬು, ವಿನೋದ್ ಪ್ರಭಾಕರ್ ಬಣ್ಣ ಹಚ್ಚಿದ್ದಾರೆ. ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>