<p>ಸತೀಶ್ ನೀನಾಸಂ ಹಾಗೂ ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ‘ಕಲ್ಯಾಣವೇ ಗೌರಿ’ ಹಾಡು ಇಂದು (ಬುಧವಾರ) ಬಿಡುಗಡೆಯಾಗಿದೆ. ಈ ಕುರಿತು ನಟಿ ಸಪ್ತಮಿ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. </p><p>ಮದುವೆಯ ಸಂಭ್ರಮದ ಸವಿಗಾನ ‘ಕಲ್ಯಾಣವೇ ಗೌರಿ’ ಹಾಡು ಲಹರಿ ಮ್ಯೂಸಿಕ್ ಯ್ಯೂಟೂಬ್ ಚಾನೆಲ್ನಲ್ಲಿ ಮಧ್ಯಾಹ್ನ 12.06ಕ್ಕೆ ಬಿಡುಗಡೆ ಮಾಡಲಾಗಿದೆ. ಹಾಡಿನ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p>.ಸತೀಶ್ ನೀನಾಸಂ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಮಾದಪ್ಪನ ಹಾಡು ಇಂದು ಬಿಡುಗಡೆ.‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.<p>ಈ ಸಿನಿಮಾವು ವ್ಯಾಪಾರಿ ಮತ್ತು ಕೆಲಸಗಾರರ ನಡುವಿನ ಕಥೆಯನ್ನು ಒಳಗೊಂಡಿದೆ. ರೆಟ್ರೊ ಶೈಲಿಯ ಕಥೆಯಾಗಿದ್ದು, ಇದು ರೌಡಿಸಂ ಕಥೆಯಲ್ಲ. ಕ್ರಾಂತಿಕಾರಿ ಅಶೋಕನ ಕಥೆ. ವ್ಯಾಪಾರಿಗಳು ಕೂಲಿ ಕೆಲಸಗಾರರ ಮೇಲೆ ದಬ್ಬಾಳಿಕೆ ಮಾಡುವುದು ಬಹಳ ಕಾಲದಿಂದ ನಡೆದುಕೊಂಡು ಬಂದಿದೆ. ಅದರ ವಿರುದ್ಧ ಪ್ರತಿಭಟಿಸಿ ಬಂಡೇಳುವ ನಾಯಕನ ಕಥೆ ಇದಾಗಿದೆ. </p><p>ಈ ಚಿತ್ರವನ್ನು ಮನು ಶೆಡ್ಡಾರ್ ಅವರು ನಿರ್ದೇಶನ ಮಾಡುತ್ತಿದ್ದು, ಛಾಯಾಚಿತ್ರಗ್ರಹಣ ಲವಿತ್, ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸತೀಶ್ ನೀನಾಸಂ ಹಾಗೂ ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ‘ಕಲ್ಯಾಣವೇ ಗೌರಿ’ ಹಾಡು ಇಂದು (ಬುಧವಾರ) ಬಿಡುಗಡೆಯಾಗಿದೆ. ಈ ಕುರಿತು ನಟಿ ಸಪ್ತಮಿ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. </p><p>ಮದುವೆಯ ಸಂಭ್ರಮದ ಸವಿಗಾನ ‘ಕಲ್ಯಾಣವೇ ಗೌರಿ’ ಹಾಡು ಲಹರಿ ಮ್ಯೂಸಿಕ್ ಯ್ಯೂಟೂಬ್ ಚಾನೆಲ್ನಲ್ಲಿ ಮಧ್ಯಾಹ್ನ 12.06ಕ್ಕೆ ಬಿಡುಗಡೆ ಮಾಡಲಾಗಿದೆ. ಹಾಡಿನ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p>.ಸತೀಶ್ ನೀನಾಸಂ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಮಾದಪ್ಪನ ಹಾಡು ಇಂದು ಬಿಡುಗಡೆ.‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.<p>ಈ ಸಿನಿಮಾವು ವ್ಯಾಪಾರಿ ಮತ್ತು ಕೆಲಸಗಾರರ ನಡುವಿನ ಕಥೆಯನ್ನು ಒಳಗೊಂಡಿದೆ. ರೆಟ್ರೊ ಶೈಲಿಯ ಕಥೆಯಾಗಿದ್ದು, ಇದು ರೌಡಿಸಂ ಕಥೆಯಲ್ಲ. ಕ್ರಾಂತಿಕಾರಿ ಅಶೋಕನ ಕಥೆ. ವ್ಯಾಪಾರಿಗಳು ಕೂಲಿ ಕೆಲಸಗಾರರ ಮೇಲೆ ದಬ್ಬಾಳಿಕೆ ಮಾಡುವುದು ಬಹಳ ಕಾಲದಿಂದ ನಡೆದುಕೊಂಡು ಬಂದಿದೆ. ಅದರ ವಿರುದ್ಧ ಪ್ರತಿಭಟಿಸಿ ಬಂಡೇಳುವ ನಾಯಕನ ಕಥೆ ಇದಾಗಿದೆ. </p><p>ಈ ಚಿತ್ರವನ್ನು ಮನು ಶೆಡ್ಡಾರ್ ಅವರು ನಿರ್ದೇಶನ ಮಾಡುತ್ತಿದ್ದು, ಛಾಯಾಚಿತ್ರಗ್ರಹಣ ಲವಿತ್, ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>