<p>ಸತೀಶ್ ನೀನಾಸಂ ಹಾಗೂ ಸಪ್ತಮಿಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಫೆ.18ರಂದು ಗುರುವಾರ ಬಿಡುಗಡೆಯಾಗಿದೆ. ಈ ಚಿತ್ರವು ಫೆ.27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.</p><p>ಈ ಚಿತ್ರದ ಟ್ರೇಲರ್ ಅನ್ನು ಚಂದನವನದ ತಾರೆಯರಾದ ನಟ ರವಿಚಂದ್ರನ್, ದುನಿಯಾ ವಿಜಯ್, ಪ್ರಜ್ವಲ್ ದೇವರಾಜ್, ಡಾಲಿ ಧನಂಜಯ್, ಯೋಗೆಶ್, ದಿಗಂತ್, ಡಾರ್ಲಿಂಗ್ ಕೃಷ್ಣಾ, ವಸಿಷ್ಠ ಸಿಂಹ, ನಾಗಭೂಷಣ್, ಶಿವರಾಜ್ ಕೆ.ಆರ್.ಪೇಟೆ ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. </p>.<p>ಬಿಡುಗಡೆಗೊಂಡ ಟ್ರೇಲರ್ನಲ್ಲಿ, ‘ಜಾತಿ ತಾರತಮ್ಯ, ದಬ್ಬಾಳಿಕೆ, ಜೀತ ಪದ್ಧತಿ, ಬಡತನದಿಂದ ಬೇಸತ್ತ ಅಶೋಕನು ಸರ್ಕಾರಿ ಅಧಿಕಾರಿಯಾಗಿ ಊರಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಕನಸು ಕಂಡಿರುತ್ತಾನೆ. ಅದರಂತೆಯೇ ಅಶೋಕ ಪರೀಕ್ಷೆ ಬರೆದು ಕಂದಾಯ ಅಧಿಕಾರಿಯಾಗಿ ನೇಮಕಗೊಳ್ಳುತ್ತಾನೆ‘. </p><p>ಕಂದಾಯ ಅಧಿಕಾರಿ ಅಶೋಕ ಬೇರೆ ಊರಿಗೆ ವರ್ಗಾವಣೆಯಾದ ಬಳಿಕ ಅವನ ಕುಟುಂಬ ಸದಸ್ಯರಿಗೆ ಪಾಳೇಗಾರ ಚಿತ್ರಹಿಂಸೆ ನೀಡಲು ಮುಂದಾಗುತ್ತಾರೆ. ಇದರಿಂದ ಕೋಪಗೊಂಡ ಅಶೋಕ, ಊರಿನ ಪಾಳೇಗಾರನ ವಿರುದ್ಧ ನಡೆಸುವ ಹೋರಾಟವನ್ನು ಚಿತ್ರದ ಟ್ರೇಲರ್ನಲ್ಲಿ ತೋರಿಸಲಾಗಿದೆ. </p><p>ಮನು ಶೆಡ್ಗಾರ್ ನಿರ್ದೇಶನದ ಈ ಚಿತ್ರವನ್ನು<strong> </strong>ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸತೀಶ್ ನೀನಾಸಂ ಹಾಗೂ ಸಪ್ತಮಿಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಫೆ.18ರಂದು ಗುರುವಾರ ಬಿಡುಗಡೆಯಾಗಿದೆ. ಈ ಚಿತ್ರವು ಫೆ.27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.</p><p>ಈ ಚಿತ್ರದ ಟ್ರೇಲರ್ ಅನ್ನು ಚಂದನವನದ ತಾರೆಯರಾದ ನಟ ರವಿಚಂದ್ರನ್, ದುನಿಯಾ ವಿಜಯ್, ಪ್ರಜ್ವಲ್ ದೇವರಾಜ್, ಡಾಲಿ ಧನಂಜಯ್, ಯೋಗೆಶ್, ದಿಗಂತ್, ಡಾರ್ಲಿಂಗ್ ಕೃಷ್ಣಾ, ವಸಿಷ್ಠ ಸಿಂಹ, ನಾಗಭೂಷಣ್, ಶಿವರಾಜ್ ಕೆ.ಆರ್.ಪೇಟೆ ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. </p>.<p>ಬಿಡುಗಡೆಗೊಂಡ ಟ್ರೇಲರ್ನಲ್ಲಿ, ‘ಜಾತಿ ತಾರತಮ್ಯ, ದಬ್ಬಾಳಿಕೆ, ಜೀತ ಪದ್ಧತಿ, ಬಡತನದಿಂದ ಬೇಸತ್ತ ಅಶೋಕನು ಸರ್ಕಾರಿ ಅಧಿಕಾರಿಯಾಗಿ ಊರಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಕನಸು ಕಂಡಿರುತ್ತಾನೆ. ಅದರಂತೆಯೇ ಅಶೋಕ ಪರೀಕ್ಷೆ ಬರೆದು ಕಂದಾಯ ಅಧಿಕಾರಿಯಾಗಿ ನೇಮಕಗೊಳ್ಳುತ್ತಾನೆ‘. </p><p>ಕಂದಾಯ ಅಧಿಕಾರಿ ಅಶೋಕ ಬೇರೆ ಊರಿಗೆ ವರ್ಗಾವಣೆಯಾದ ಬಳಿಕ ಅವನ ಕುಟುಂಬ ಸದಸ್ಯರಿಗೆ ಪಾಳೇಗಾರ ಚಿತ್ರಹಿಂಸೆ ನೀಡಲು ಮುಂದಾಗುತ್ತಾರೆ. ಇದರಿಂದ ಕೋಪಗೊಂಡ ಅಶೋಕ, ಊರಿನ ಪಾಳೇಗಾರನ ವಿರುದ್ಧ ನಡೆಸುವ ಹೋರಾಟವನ್ನು ಚಿತ್ರದ ಟ್ರೇಲರ್ನಲ್ಲಿ ತೋರಿಸಲಾಗಿದೆ. </p><p>ಮನು ಶೆಡ್ಗಾರ್ ನಿರ್ದೇಶನದ ಈ ಚಿತ್ರವನ್ನು<strong> </strong>ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>