ಮುಖ್ಯ ಪಾತ್ರದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಟಿಸಿದ್ದಾರೆ. ರಾಶಿ ಖನ್ನಾ, ರಿಧಿ ಡೋಗ್ರಾ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಮೇ 3ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ.
ಗೋದ್ರಾ ಹತ್ಯಾಕಾಂಡದ ಕುರಿತು ಸುದ್ದಿ ವಾಚನ ಮಾಡುವ ಪತ್ರಕರ್ತನ ಪಾತ್ರದಲ್ಲಿ ವಿಕ್ರಾಂತ್ ಮಾಸ್ಸಿ ಅವರು ಕಾಣಿಸಿಕೊಂಡಿರುವುದನ್ನು ಟೀಸರ್ನಲ್ಲಿ ಗಮನಿಸಬಹುದು.
ಸಿನಿಮಾವನ್ನು ಬಾಲಾಜಿ ಮೋಷನ್ ಪಿಕ್ಚರ್ಸ್ ಹಾಗೂ ವಿಕಿರ್ ಪ್ರೊಡಕ್ಷನ್ ಜಂಟಿಯಾಗಿ ನಿರ್ಮಾಣ ಮಾಡಿವೆ. ರಂಜನ್ ಚಂಡೇಲ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.