ಬ್ಲಾಕ್ಬ್ಲಾಸ್ಟರ್ ‘ತನ್ಹಾಜಿ:ದಿ ಅನ್ಸಂಗ್ ವಾರಿಯರ್‘ ಚಿತ್ರದ ನಿರ್ದೇಶಕ ಓಂ ರಾವುತ್ ಆದಿಪುರುಷ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಕಥೆಯಾಧಾರಿತ ಚಿತ್ರ ಇದಾಗಿದ್ದು, ಬಾಹುಬಲಿ ಖ್ಯಾತಿಯ ಪ್ರಭಾಸ್ ಈ ಚಿತ್ರದಲ್ಲಿ ರಾಘವ ಪಾತ್ರವನ್ನು ನಿರ್ವಹಿಸಲಿದ್ದಾರೆ. ಬಾಲಿವುಡ್ ನಟಿ ಕೃತಿ ಸನೂನ್ ಸೀತೆಯಾಗಿ ಕಾಣಿಸಿಕೊಂಡರೆ, ನಟ ಸನ್ನಿ ಲಕ್ಷಣನಾಗಿ ಕಾಣಿಸಿಕೊಂಡಿದ್ದಾರೆ. ಜೂನ್ 16ರಂದು ಚಿತ್ರ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.