‘ಕಾಂತಾರ’ ಸಿನಿಮಾ ಬಳಿಕ ಸಪ್ತಮಿ, ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ನಟನೆಯ, ಕೃಷ್ಣ ಅವರು ಆ್ಯಕ್ಷನ್ ಕಟ್ ಹೇಳಿರುವ ‘ಕಾಳಿ’ ಸಿನಿಮಾಗೆ ಕಾಲ್ಶೀಟ್ ನೀಡಿದ್ದರು. ಇದಾದ ಬಳಿಕ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ನಟಸುತ್ತಿರುವ ಸುದ್ದಿ ಹೊರಬಿದ್ದಿತ್ತು. ಈ ಪ್ರಾಜೆಕ್ಟ್ ಪೂರ್ಣಗೊಳಿಸಿದ್ದ ಸಪ್ತಮಿ, ಹೊಂಬಾಳೆ ಫಿಲ್ಮ್ಸ್ ಜೊತೆಗೆ ಮತ್ತೆ ಕೈಜೋಡಿಸಿದ್ದರು. ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದರಾಮ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುವ’ ಸಿನಿಮಾದಲ್ಲಿ ಯುವ ರಾಜ್ಕುಮಾರ್ಗೆ ಜೋಡಿಯಾಗಿದ್ದರು.