<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿರುವ ಜಾಮೀನಿನ ಷರತ್ತುಗಳ ಅನ್ವಯ ನಟ ಅಲ್ಲು ಅರ್ಜುನ್ ಅವರು ಶ್ಯೂರಿಟಿ ಮತ್ತು ಬಾಂಡ್ಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದರು.</p>.<p>‘ನ್ಯಾಯಾಲಯದ ನಿರ್ದೇಶನದಂತೆ ಅಲ್ಲು ಅರ್ಜುನ್ ನೇರವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು’ ಎಂದು ಅರ್ಜುನ್ ಪರ ವಕೀಲ ಅಶೋಕ್ ರೆಡ್ಡಿ ತಿಳಿಸಿದರು. ಈ ವೇಳೆ ಅರ್ಜುನ್ ಜೊತೆ ಅವರ ಮಾವ ಚಂದ್ರಶೇಖರ್ ರೆಡ್ಡಿ ಕೂಡ ಇದ್ದರು. </p>.<p>ಎರಡನೇ ಹೆಚ್ಚುವರಿ ಮೆಟ್ರೊಪಾಲಿಟನ್ ಸೆಷನ್ಸ್ ನ್ಯಾಯಾಧೀಶರು ಅಲ್ಲುಗೆ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು.</p>.<p>ಎರಡು ತಿಂಗಳು ಅಥವಾ ದೋಷಾರೋಪ ಪಟ್ಟಿ ಸಲ್ಲಿಕೆ ಆಗುವವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ನಡುವೆ ತನಿಖಾಧಿಕಾರಿಯ ಮುಂದೆ ಹಾಜರಾಗುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯಾಲಯ ಅಲ್ಲು ಅರ್ಜುನ್ಗೆ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿರುವ ಜಾಮೀನಿನ ಷರತ್ತುಗಳ ಅನ್ವಯ ನಟ ಅಲ್ಲು ಅರ್ಜುನ್ ಅವರು ಶ್ಯೂರಿಟಿ ಮತ್ತು ಬಾಂಡ್ಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದರು.</p>.<p>‘ನ್ಯಾಯಾಲಯದ ನಿರ್ದೇಶನದಂತೆ ಅಲ್ಲು ಅರ್ಜುನ್ ನೇರವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು’ ಎಂದು ಅರ್ಜುನ್ ಪರ ವಕೀಲ ಅಶೋಕ್ ರೆಡ್ಡಿ ತಿಳಿಸಿದರು. ಈ ವೇಳೆ ಅರ್ಜುನ್ ಜೊತೆ ಅವರ ಮಾವ ಚಂದ್ರಶೇಖರ್ ರೆಡ್ಡಿ ಕೂಡ ಇದ್ದರು. </p>.<p>ಎರಡನೇ ಹೆಚ್ಚುವರಿ ಮೆಟ್ರೊಪಾಲಿಟನ್ ಸೆಷನ್ಸ್ ನ್ಯಾಯಾಧೀಶರು ಅಲ್ಲುಗೆ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು.</p>.<p>ಎರಡು ತಿಂಗಳು ಅಥವಾ ದೋಷಾರೋಪ ಪಟ್ಟಿ ಸಲ್ಲಿಕೆ ಆಗುವವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ನಡುವೆ ತನಿಖಾಧಿಕಾರಿಯ ಮುಂದೆ ಹಾಜರಾಗುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯಾಲಯ ಅಲ್ಲು ಅರ್ಜುನ್ಗೆ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>