<p><strong>ದ ಜಡ್ಜ್ಮೆಂಟ್:</strong> </p><p>ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ಮೆಂಟ್’ ಚಿತ್ರ ಇಂದು(ಮೇ 24) ತೆರೆಗೆ ಬರುತ್ತಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಗುರುರಾಜ ಕುಲಕರ್ಣಿ ಈ ಚಿತ್ರಕ್ಕೆ ಆ್ಯಕ್ಷನ್–ಕಟ್ ಹೇಳಿದ್ದಾರೆ. </p>.<p>‘ನ್ಯಾಯವಾದಿಯೊಬ್ಬ ನ್ಯಾಯಕ್ಕೋಸ್ಕರ, ನ್ಯಾಯಾಲಯದ ಪರಿಧಿಯಲ್ಲೇ ಹೋರಾಡುತ್ತಾನೆ. ಇರುವ ವ್ಯವಸ್ಥೆಯನ್ನು ದೂರದೇ, ಇದ್ದ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಕಥೆ. ರವಿಚಂದ್ರನ್ ನ್ಯಾಯವಾದಿಯಾಗಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ಕುಲಕರ್ಣಿ.</p>.<p>ನಟಿ ಮೇಘನಾ ಗಾಂವ್ಕರ್ ರವಿಚಂದ್ರನ್ಗೆ ಜೋಡಿಯಾಗಿದ್ದಾರೆ. ದಿಗಂತ್, ಧನ್ಯಾ ರಾಮ್ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್.ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಚಿತ್ರಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.</p>.<p><strong>ಎವಿಡೆನ್ಸ್ :</strong> </p><p>ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೊಂದು ತ್ರಿಕೋನ ಪ್ರೇಮಕಥಾಹಂದರ ಒಳಗೊಂಡ ಎವಿಡೆನ್ಸ್ ತೆರೆಗೆ ಬರುತ್ತಿರುವ ಮತ್ತೊಂದು ಚಿತ್ರ ನಟ, ನಿರ್ದೇಶಕ ಉಪೇಂದ್ರ ಅವರ ಜೊತೆ ‘ಶ್..’ ಚಿತ್ರದಿಂದ ‘ಉಪೇಂದ್ರ-2’ ವರೆಗೂ ಕೆಲಸ ಮಾಡಿದ ಪ್ರವೀಣ್ ಸಿ. ಪಿ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>ಶ್ರೀಧೃತಿ ಪ್ರೊಡಕ್ಷನ್ ನಿರ್ಮಾಣದ ಚಿತ್ರದಲ್ಲಿ ನಾಯಕನಾಗಿ ‘ಜೋಶ್’ ಖ್ಯಾತಿಯ ರೋಬೊ ಗಣೇಶನ್ ಅವರು ನಟಿಸಿದ್ದು, ನಟಿ ಮಾನಸ ಜೋಶಿ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ, ರವಿ ಸುವರ್ಣ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.</p>.<p><strong>ಮೂರನೇ ಕೃಷ್ಣಪ್ಪ:</strong> </p><p>ರಂಗಾಯಣ ರಘು ಹಾಗೂ ಸಂಪತ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಮೂರನೇ ಕೃಷ್ಣಪ್ಪ’ ಚಿತ್ರವು ತೆರೆಕಾಣುತ್ತಿದೆ. ನವೀನ್ ನಾರಾಯಣಘಟ್ಟ ನಿರ್ದೇಶನದ ಈ ಚಿತ್ರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನ ನಾರಾಯಣಪುರ ಎಂಬಲ್ಲಿ ನಡೆಯುವ ಕಥೆಯನ್ನು ಹೊಂದಿದೆ. </p>.<p>ಊರಲ್ಲಿ ‘ಕೃಷ್ಣಪ್ಪ’ ಹೆಸರಿನ ಮೂವರಿದ್ದು, ಅದರಲ್ಲಿ ನಟ ಸಂಪತ್ ‘ಮೂರನೇ ಕೃಷ್ಣಪ್ಪ’ನಿಗೆ ಬಣ್ಣಹಚ್ಚಿದ್ದಾರೆ. ‘ವೀರಣ್ಣ’ನಾಗಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದು, ಸಂತೋಷ್, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ. ಆನಂದ್ ರಾಜವಿಕ್ರಮ್ ಸಂಗೀತ, ಶ್ರೀಕಾಂತ್ ಸಂಕಲನ, ಯೋಗಿ ಛಾಯಾಚಿತ್ರಗ್ರಹಣವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದ ಜಡ್ಜ್ಮೆಂಟ್:</strong> </p><p>ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ಮೆಂಟ್’ ಚಿತ್ರ ಇಂದು(ಮೇ 24) ತೆರೆಗೆ ಬರುತ್ತಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಗುರುರಾಜ ಕುಲಕರ್ಣಿ ಈ ಚಿತ್ರಕ್ಕೆ ಆ್ಯಕ್ಷನ್–ಕಟ್ ಹೇಳಿದ್ದಾರೆ. </p>.<p>‘ನ್ಯಾಯವಾದಿಯೊಬ್ಬ ನ್ಯಾಯಕ್ಕೋಸ್ಕರ, ನ್ಯಾಯಾಲಯದ ಪರಿಧಿಯಲ್ಲೇ ಹೋರಾಡುತ್ತಾನೆ. ಇರುವ ವ್ಯವಸ್ಥೆಯನ್ನು ದೂರದೇ, ಇದ್ದ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಕಥೆ. ರವಿಚಂದ್ರನ್ ನ್ಯಾಯವಾದಿಯಾಗಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ಕುಲಕರ್ಣಿ.</p>.<p>ನಟಿ ಮೇಘನಾ ಗಾಂವ್ಕರ್ ರವಿಚಂದ್ರನ್ಗೆ ಜೋಡಿಯಾಗಿದ್ದಾರೆ. ದಿಗಂತ್, ಧನ್ಯಾ ರಾಮ್ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್.ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಚಿತ್ರಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.</p>.<p><strong>ಎವಿಡೆನ್ಸ್ :</strong> </p><p>ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೊಂದು ತ್ರಿಕೋನ ಪ್ರೇಮಕಥಾಹಂದರ ಒಳಗೊಂಡ ಎವಿಡೆನ್ಸ್ ತೆರೆಗೆ ಬರುತ್ತಿರುವ ಮತ್ತೊಂದು ಚಿತ್ರ ನಟ, ನಿರ್ದೇಶಕ ಉಪೇಂದ್ರ ಅವರ ಜೊತೆ ‘ಶ್..’ ಚಿತ್ರದಿಂದ ‘ಉಪೇಂದ್ರ-2’ ವರೆಗೂ ಕೆಲಸ ಮಾಡಿದ ಪ್ರವೀಣ್ ಸಿ. ಪಿ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>ಶ್ರೀಧೃತಿ ಪ್ರೊಡಕ್ಷನ್ ನಿರ್ಮಾಣದ ಚಿತ್ರದಲ್ಲಿ ನಾಯಕನಾಗಿ ‘ಜೋಶ್’ ಖ್ಯಾತಿಯ ರೋಬೊ ಗಣೇಶನ್ ಅವರು ನಟಿಸಿದ್ದು, ನಟಿ ಮಾನಸ ಜೋಶಿ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ, ರವಿ ಸುವರ್ಣ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.</p>.<p><strong>ಮೂರನೇ ಕೃಷ್ಣಪ್ಪ:</strong> </p><p>ರಂಗಾಯಣ ರಘು ಹಾಗೂ ಸಂಪತ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಮೂರನೇ ಕೃಷ್ಣಪ್ಪ’ ಚಿತ್ರವು ತೆರೆಕಾಣುತ್ತಿದೆ. ನವೀನ್ ನಾರಾಯಣಘಟ್ಟ ನಿರ್ದೇಶನದ ಈ ಚಿತ್ರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನ ನಾರಾಯಣಪುರ ಎಂಬಲ್ಲಿ ನಡೆಯುವ ಕಥೆಯನ್ನು ಹೊಂದಿದೆ. </p>.<p>ಊರಲ್ಲಿ ‘ಕೃಷ್ಣಪ್ಪ’ ಹೆಸರಿನ ಮೂವರಿದ್ದು, ಅದರಲ್ಲಿ ನಟ ಸಂಪತ್ ‘ಮೂರನೇ ಕೃಷ್ಣಪ್ಪ’ನಿಗೆ ಬಣ್ಣಹಚ್ಚಿದ್ದಾರೆ. ‘ವೀರಣ್ಣ’ನಾಗಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದು, ಸಂತೋಷ್, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ. ಆನಂದ್ ರಾಜವಿಕ್ರಮ್ ಸಂಗೀತ, ಶ್ರೀಕಾಂತ್ ಸಂಕಲನ, ಯೋಗಿ ಛಾಯಾಚಿತ್ರಗ್ರಹಣವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>