ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಸಾಯಿ ಧರ್ಮ್ ತೇಜ್ ಅಪಘಾತಕ್ಕೆ ಕಾರಣ ಬಹಿರಂಗಪಡಿಸಿದ ಪೊಲೀಸರು

Last Updated 12 ಸೆಪ್ಟೆಂಬರ್ 2021, 5:28 IST
ಅಕ್ಷರ ಗಾತ್ರ

ಹೈದರಾಬಾದ್: ಕಳೆದ ಶುಕ್ರವಾರ ರಾತ್ರಿ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಹೈದರಾಬಾದ್ ಜುಬಿಲಿ ಹಿಲ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ಸಾಯಿ ಧರ್ಮ್ ತೇಜ್ ಅಪಘಾತಕ್ಕೆ ಪೊಲೀಸರು ಕಾರಣ ನೀಡಿದ್ದಾರೆ.

‘ಶುಕ್ರವಾರ ರಾತ್ರಿ 8 ಗಂಟೆಗೆ ಮಾಧಾಪುರ್ ಕೇಬಲ್ ಸೇತುವೆ ಮೇಲೆ ತೇಜ್ ಚಲಾಯಿಸುತ್ತಿದ್ದ ಕ್ರೀಡಾ ಬೈಕ್ ಉರುಳಿ ಬಿದ್ದು, ಅವರಿಗೆ ಕೈಕಾಲು, ಪಕ್ಕೆಲುಬು ಸೇರಿದಂತೆ ದೇಹದ ನಾನಾ ಕಡೆ ಗಂಭೀರ ಗಾಯಗಳಾಗಿದ್ದವು. ಅವರು ಮಾಧಾಪುರ್ ಕೇಬಲ್ ಸೇತುವೆ ಮೇಲೆ ಬೈಕ್‌ನ್ನು ಗಂಟೆಗೆ 80 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದದ್ದೇ ಅಪಘಾತವಾಗಲು ಕಾರಣ. ಈ ಸೇತುವೆ ಮೇಲೆ ಅಧಿಕ ವೇಗ ನಿಷೇಧಿಸಲಾಗಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ವಾಹನ ಚಲಾಯಿಸಲು ಮಾತ್ರ ಅವಕಾಶ ಇದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

‘ಇದೊಂದು ದುರದೃಷ್ಟಕರ ಘಟನೆ, ನಿಗದಿತ ವೇಗಕ್ಕಿಂತ ತೇಜ್ ಅವರು ಅಧಿಕ ವೇಗದಲ್ಲಿ ಬೈಕ್ ಚಲಾಯಿಸಿದ್ದರು. ಅಲ್ಲದೇ ಹೆಲ್ಮೆಟ್‌ ಕೂಡ ಸರಿಯಾಗಿ ಹಾಕಿರಲಿಲ್ಲ‘ ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಲಕ್ಷ್ಯತನದಿಂದ ವಾಹನ ಸವಾರಿ ಮಾಡಿದ್ದಕ್ಕೆ ಸಾಯಿ ಧರ್ಮ ತೇಜ್ ಅವರ ಮೇಲೆ ಐಪಿಸಿ ಕಲಂ 336 ಮತ್ತು 279 ಅಡಿ ಸೈಬರಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಯಿ ಧರ್ಮ ತೇಜ್‌ ಅವರಿಗೆಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

'ಪಿಲ್ಲಾ ನ್ನುವು ಲೇನು ಜೀವಿತಂ' ತೆಲುಗು ಸಿನಿಮಾ ಮೂಲಕ ಚಿತ್ರರಂಗ ಪಾದಾರ್ಪಣೆ ಮಾಡಿದ್ದ ತೇಜ್, ಇದುವರೆಗೆ 13 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಅವರು ‘ರಿಪಬ್ಲಿಕ್‘ ಎಂಬ ಸಿನಿಮಾಕ್ಕೆ ಬಣ್ಣ ಹಚ್ಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT