ಹೈದರಾಬಾದ್: ತೆಲುಗಿನ ಆ್ಯಕ್ಷನ್ ನಟ ಗೋಪಿಚಂದ್ ಅವರಿಗೆ ಚಿತ್ರೀಕರಣ ಸಮಯದಲ್ಲಿ ಗಾಯವಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಇನ್ನೂ ಹೆಸರಿಡದ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿತ್ತು. ಚಿತ್ರೀಕರಣ ಸಮಯದಲ್ಲಿ ಗೋಪಿಚಂದ್ ಕಾಲು ಜಾರಿ ಕೆಳಗೆ ಬಿದಿದ್ದಾರೆ. ಅವರಿಗೆ ಗಾಯವಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ಶ್ರೀವಾಸ್ ಒಲೆಟ್ಟಿ ತಿಳಿಸಿದ್ದಾರೆ.
‘ಗೋಪಿಚಂದ್ ಅವರಿಗೆ ಸಣ್ಣ ಗಾಯವಾಗಿತ್ತು. ಚಿಕಿತ್ಸೆ ಪಡೆದು ಅವರು ಎರಡು ದಿನ ವಿರಾಮ ತೆಗೆದುಕೊಂಡಿದ್ದಾರೆ. ಇದೀಗ ಶೂಟಿಂಗ್ಗೆ ಮರಳಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಶ್ರೀವಾಸ್ ಹೇಳಿದ್ದಾರೆ.