ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗು ನಟ ರಾಮ್‌ ಪೋತಿನೇನಿ ಚಿತ್ರಕ್ಕೆ ಬೊಯಪಾಟಿ ಶ್ರೀನು ಆ್ಯಕ್ಷನ್ ಕಟ್

Last Updated 19 ಫೆಬ್ರುವರಿ 2022, 10:34 IST
ಅಕ್ಷರ ಗಾತ್ರ

ಹೈದರಾಬಾದ್: ತೆಲುಗು ನಟ ರಾಮ್‌ ಪೋತಿನೇನಿ ಅವರ ಹೊಸ ಸಿನಿಮಾಗೆ ನಿರ್ದೇಶಕ ಬೊಯಪಾಟಿ ಶ್ರೀನು ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಬೊಯಪಾಟಿ ಶ್ರೀನು - ನಟ ನಂದಮೂರಿ ಬಾಲಕೃಷ್ಣ ಕಾಂಬಿನೇಷನ್‌ನಲ್ಲಿ ತೆರೆ ಕಂಡಿದ್ದ ‘ಅಖಂಡ’ ಸಿನಿಮಾ ಸೂಪರ್ ಹಿಟ್‌ ಆಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದೀಗ ಬೊಯಪಾಟಿ ಶ್ರೀನು -ರಾಮ್‌ ಪೋತಿನೇನಿ ಕಾಂಬೋದಲ್ಲಿ ಮೂಡಿಬರಲಿರುವ ಹೊಸ ಸಿನಿಮಾ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಸಿನಿಮಾ ಬಗ್ಗೆ ಮಾತನಾಡಿರುವ ಶ್ರೀನು, ‘ಅಖಂಡ’ ಚಿತ್ರದ ಯಶಸ್ಸಿನ ಬಳಿಕ ರಾಮ್‌ ಪೋತಿನೇನಿ ಅವರಿಗೆ ಸಿನಿಮಾ ನಿರ್ದೇಶನ ಮಾಡುತ್ತಿರುವುದು ಸಂತಸ ತರಿಸಿದೆ. ಈ ಚಿತ್ರ ಪ್ರೇಕ್ಷಕರಿಗೆ ಹೆಚ್ಚು ಮನರಂಜನೆ ನೀಡಲಿದೆ ಎಂದು ನಾನು ಭರವಸೆ ನೀಡುತ್ತೇನೆ’ ಎಂದಿದ್ದಾರೆ.

‘ಬೊಯಪಾಟಿ ಅವರ ನಿರ್ದೇಶನದಲ್ಲಿ ನಟಿಸಲು ಹೆಚ್ಚು ಉತ್ಸುಕನಾಗಿದ್ದೇನೆ. ಚಿತ್ರದ ಚಿತ್ರೀಕರಣ, ನಟಿ ಯಾರೆಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತದೆ’ ಎಂದು ನಟ ರಾಮ್‌ ಪೋತಿನೇನಿ ತಿಳಿಸಿದ್ದಾರೆ.

ನಿರ್ಮಾಪಕ ಶ್ರೀನಿವಾಸ ಚಿತ್ತೂರಿ ಅವರು ತಮ್ಮದೇ ಸಿಲ್ವರ್ ಸ್ಕ್ರೀನ್ ಬ್ಯಾನರ್‌ನ ಅಡಿಯಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ಬ್ಲಾಕ್‌ಬಸ್ಟರ್‌ಗಳನ್ನುನೀಡಿದ್ದು, ಸದ್ಯ ರಾಮ್ ಪೋತಿನೇನಿ ಅಭಿನಯದ ಮತ್ತು ಎನ್.ಲಿಂಗುಸಾಮಿ ನಿರ್ದೇಶನದ ‘ದಿ ವಾರಿಯರ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾ ಬಿಡುಗಡೆಗೂಮುನ್ನ ಮತ್ತೊಂದು ಸಿನಿಮಾವನ್ನು ಘೋಷಣೆಮಾಡಿ ಅಚ್ಚರಿ ಮೂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT