<p><strong>ಹೈದರಾಬಾದ್:</strong> ತೆಲುಗು ನಟ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ದೊಡ್ಡ ಬಜೆಟ್ ಚಿತ್ರಗಳಾದ ಎಸ್.ಎಸ್. ರಾಜಮೌಳಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಆರ್ಆರ್ಆರ್(ರೌದ್ರ–ರಣ–ರುಧಿರ), ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರಗಳನ್ನು ಮುಂದೂಡಲಾಗಿದೆ.</p>.<p>‘ಕೆಜಿಎಫ್-2’, ‘ಲಾಲ್ ಸಿಂಗ್ ಚಡ್ಡಾ’, ‘ಎಫ್ 3’ ಸೇರಿದಂತೆ ಬಹುನಿರೀಕ್ಷಿತ ಚಿತ್ರಗಳು ಈಗಾಗಲೇ ಬಿಡುಗಡೆ ದಿನಾಂಕವನ್ನು ಘೋಷಿಸಿವೆ.</p>.<p>‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಬಳಿಕ ದಿನಾಂಕವನ್ನು ಏ.1ಕ್ಕೆ ಮುಂದೂಡಿಕೆ ಮಾಡಿತ್ತು. ಆದರೆ, ಇದೀಗ ಬಂದ ಮಾಹಿತಿ ಪ್ರಕಾರ, ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ’ ಎಂದು ತಿಳಿದುಬಂದಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/naga-chaitanya-opens-up-on-divorce-with-samantha-ruth-prabhu-for-first-time-901587.html" target="_blank">ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೌನ ಮುರಿದ ನಾಗ ಚೈತನ್ಯ: ಹೇಳಿದ್ದೇನು ಗೊತ್ತಾ?</a></strong><br /><br />ದೇಶದಾದ್ಯಂತ ಕೋವಿಡ್ ಹಾಗೂ ಕೊರೊನಾ ವೈರಸ್ ರೂಪಾಂತರಿ ತಳಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಹೇರಲಾಗಿದೆ.</p>.<p>ಇತ್ತೀಚೆಗೆ ಮಹೇಶ್ ಬಾಬು (46) ಅವರಿಗೆ ಕೋವಿಡ್ ದೃಢಪಟ್ಟಿತ್ತು. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದರು.</p>.<p>ಇದರ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು (56) ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲುಗು ನಟ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ದೊಡ್ಡ ಬಜೆಟ್ ಚಿತ್ರಗಳಾದ ಎಸ್.ಎಸ್. ರಾಜಮೌಳಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಆರ್ಆರ್ಆರ್(ರೌದ್ರ–ರಣ–ರುಧಿರ), ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರಗಳನ್ನು ಮುಂದೂಡಲಾಗಿದೆ.</p>.<p>‘ಕೆಜಿಎಫ್-2’, ‘ಲಾಲ್ ಸಿಂಗ್ ಚಡ್ಡಾ’, ‘ಎಫ್ 3’ ಸೇರಿದಂತೆ ಬಹುನಿರೀಕ್ಷಿತ ಚಿತ್ರಗಳು ಈಗಾಗಲೇ ಬಿಡುಗಡೆ ದಿನಾಂಕವನ್ನು ಘೋಷಿಸಿವೆ.</p>.<p>‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಬಳಿಕ ದಿನಾಂಕವನ್ನು ಏ.1ಕ್ಕೆ ಮುಂದೂಡಿಕೆ ಮಾಡಿತ್ತು. ಆದರೆ, ಇದೀಗ ಬಂದ ಮಾಹಿತಿ ಪ್ರಕಾರ, ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ’ ಎಂದು ತಿಳಿದುಬಂದಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/naga-chaitanya-opens-up-on-divorce-with-samantha-ruth-prabhu-for-first-time-901587.html" target="_blank">ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೌನ ಮುರಿದ ನಾಗ ಚೈತನ್ಯ: ಹೇಳಿದ್ದೇನು ಗೊತ್ತಾ?</a></strong><br /><br />ದೇಶದಾದ್ಯಂತ ಕೋವಿಡ್ ಹಾಗೂ ಕೊರೊನಾ ವೈರಸ್ ರೂಪಾಂತರಿ ತಳಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಹೇರಲಾಗಿದೆ.</p>.<p>ಇತ್ತೀಚೆಗೆ ಮಹೇಶ್ ಬಾಬು (46) ಅವರಿಗೆ ಕೋವಿಡ್ ದೃಢಪಟ್ಟಿತ್ತು. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದರು.</p>.<p>ಇದರ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು (56) ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>