ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಥಳೀಯ ಮಟ್ಟದ ನಾಯಕರಿಂದ ರಾಜ್ಯಮಟ್ಟದ ವರೆಗೂ ಎಲ್ಲರೂ ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಯಾರೂ ನನ್ನ ಪರ ಪ್ರಚಾರಕ್ಕೆ ಬಂದಿಲ್ಲ. ಬಸವರಾಜ ಹೊರಟ್ಟಿ ಅವರ ಮಾತನ್ನು ಯಾರೂ ಕೇಳುವುದಿಲ್ಲ. ಆದ್ದರಿಂದ ಜೆಡಿಎಸ್ನಿಂದ ಸಲ್ಲಿಸಿದ ನಾಮಪತ್ರ ವಾಪಸ್ ಪಡೆಯುತ್ತಿದ್ದೇನೆ. ಜೆಡಿಎಸ್ನಲ್ಲಿ ಹೊಂದಿರುವ ಎಲ್ಲ ಸ್ಥಾನಗಳಿಗೂ ರಾಜೀನಾಮೆ ಕೊಡುತ್ತೇನೆ’ ಎಂದು ಹೇಳಿದ್ದಾರೆ.