<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ತ್ರಿಕಾರಂ’ ಚಿತ್ರದ ಎರಡನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಸೀದಾ ನಿಂತರೂ ಲೋಕ ಯಾಕೆ ಉಲ್ಟಾ ಕಾಣ್ತದೆ’ ಎಂಬ ಗೀತೆಗೆ ಕೇಶು-ಚೇತನ್ ಸಾಹಿತ್ಯ, ರಾಜೇಶ್ ಕೃಷ್ಣನ್ ಧ್ವನಿ, ವಿವೇಕ್ ಚಕ್ರವರ್ತಿ ಸಂಗೀತವಿದೆ.</p>.<p>ದಿಲೀಪ್ ಕುಮಾರ್ ಜೆ.ಆರ್.ನಿರ್ದೇಶನದ ಚಿತ್ರ ಎಲ್ಲ ಕೆಲಸಗಳನ್ನು ಮುಗಿಸಿ ಬಿಡುಗಡೆಗೆ ಸಿದ್ಧವಿದೆ. ಜಿ.ಗಣೇಶ್ ಮೂರ್ತಿ ಚಿತ್ರಕ್ಕೆ ಬಂಡವಾಳ ಹೂಡುವುದರ ಜತೆಗೆ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. </p>.<p>‘ದೇವರು ಮತ್ತು ದುಷ್ಟರ ನಡುವಿನ ಹೋರಾಟದ ಕಥೆಯನ್ನು ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಹೇಳಿದ್ದೇವೆ. ಅದು ಯಾವ ರೀತಿಯ ಹೋರಾಟ? ಶಿವನನ್ನು ತ್ರಿಕಾರಂ ಎಂದು ಏಕೆ ಕರೆಯುತ್ತಾರೆ? ಎಂಬಿತ್ಯಾದಿ ವಿಷಯಗಳನ್ನು ಚಿತ್ರದಲ್ಲಿಯೇ ನೋಡಬೇಕು. ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.</p>.<p>‘ಇದು ಸ್ಮಶಾನ ಅಲ್ಲ’ ಎಂಬ ಅಡಿಬರಹ ಚಿತ್ರಕ್ಕಿದೆ. ಮುಗ್ಧ ಹಾಗೂ ರುದ್ರನಾಗಿ ಎರಡು ಅವತಾರಗಳಲ್ಲಿ ಹರ್ಷವರ್ಧನ್ ಕಾಣಿಸಿಕೊಂಡಿದ್ದಾರೆ. ನಿಶ್ಚಿತ ಶೆಟ್ಟಿ ನಾಯಕಿ. ನಾಗೇಂದ್ರ ಅರಸ್, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ಅಭಿನಯಿಸಿದ್ದಾರೆ.<br /><br />ಹೊನ್ನಾಳಿ ಯಾಸಿನ್ ಛಾಯಾಚಿತ್ರಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ತ್ರಿಕಾರಂ’ ಚಿತ್ರದ ಎರಡನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಸೀದಾ ನಿಂತರೂ ಲೋಕ ಯಾಕೆ ಉಲ್ಟಾ ಕಾಣ್ತದೆ’ ಎಂಬ ಗೀತೆಗೆ ಕೇಶು-ಚೇತನ್ ಸಾಹಿತ್ಯ, ರಾಜೇಶ್ ಕೃಷ್ಣನ್ ಧ್ವನಿ, ವಿವೇಕ್ ಚಕ್ರವರ್ತಿ ಸಂಗೀತವಿದೆ.</p>.<p>ದಿಲೀಪ್ ಕುಮಾರ್ ಜೆ.ಆರ್.ನಿರ್ದೇಶನದ ಚಿತ್ರ ಎಲ್ಲ ಕೆಲಸಗಳನ್ನು ಮುಗಿಸಿ ಬಿಡುಗಡೆಗೆ ಸಿದ್ಧವಿದೆ. ಜಿ.ಗಣೇಶ್ ಮೂರ್ತಿ ಚಿತ್ರಕ್ಕೆ ಬಂಡವಾಳ ಹೂಡುವುದರ ಜತೆಗೆ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. </p>.<p>‘ದೇವರು ಮತ್ತು ದುಷ್ಟರ ನಡುವಿನ ಹೋರಾಟದ ಕಥೆಯನ್ನು ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಹೇಳಿದ್ದೇವೆ. ಅದು ಯಾವ ರೀತಿಯ ಹೋರಾಟ? ಶಿವನನ್ನು ತ್ರಿಕಾರಂ ಎಂದು ಏಕೆ ಕರೆಯುತ್ತಾರೆ? ಎಂಬಿತ್ಯಾದಿ ವಿಷಯಗಳನ್ನು ಚಿತ್ರದಲ್ಲಿಯೇ ನೋಡಬೇಕು. ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.</p>.<p>‘ಇದು ಸ್ಮಶಾನ ಅಲ್ಲ’ ಎಂಬ ಅಡಿಬರಹ ಚಿತ್ರಕ್ಕಿದೆ. ಮುಗ್ಧ ಹಾಗೂ ರುದ್ರನಾಗಿ ಎರಡು ಅವತಾರಗಳಲ್ಲಿ ಹರ್ಷವರ್ಧನ್ ಕಾಣಿಸಿಕೊಂಡಿದ್ದಾರೆ. ನಿಶ್ಚಿತ ಶೆಟ್ಟಿ ನಾಯಕಿ. ನಾಗೇಂದ್ರ ಅರಸ್, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ಅಭಿನಯಿಸಿದ್ದಾರೆ.<br /><br />ಹೊನ್ನಾಳಿ ಯಾಸಿನ್ ಛಾಯಾಚಿತ್ರಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>