<p>ಮುಂಬೈ ಸರಣಿ ಸ್ಫೋಟದ ಸಂದರ್ಭದಲ್ಲಿ ಸಂಜಯ್ ದತ್ ಅವರು ಎದುರಿಸಿದ ಸವಾಲುಗಳ ಬಗ್ಗೆ ಅವರ ಪುತ್ರಿ ತ್ರಿಶಾಲಾ ದತ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಬಗ್ಗೆ ‘ಎನ್ಡಿಟಿ‘ ವರದಿ ಮಾಡಿದೆ. </p><p>ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಸಂಜಯ್ ದತ್ ಅವರಿಗೆ ಸುಪ್ರೀಂ ಕೋರ್ಟ್ 5 ವರ್ಷ ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಡಿ ಅವರು ಪುಣೆಯ ಯರವಾಡ ಜೈಲಿನಲ್ಲಿ ಈ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರು. </p><p>ಈ ಕುರಿತು ಮಾತನಾಡಿರುವ ತ್ರಿಶಾಲಾ, ‘1993ರಲ್ಲಿ ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಅದೇ ವೇಳೆ ಕಾನೂನುಬಾಹಿರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪ ನನ್ನ ತಂದೆ ಮೇಲೆ ಬಂತು. ಆ ಘಟನೆಯ ಬಳಿಕ ನಮ್ಮ ಕುಟುಂಬಸ್ಥರನ್ನು ಜನರು ತೀವ್ರವಾಗಿ ಟೀಕೆ ಮಾಡಿದ್ದರು’ ಎಂದು ಹೇಳಿಕೊಂಡಿದ್ದಾರೆ.</p><p>ಮುಂಬೈ ಘಟನೆಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಚರ್ಚಿಸುವುದು ಸುಲಭದ ಮಾತಲ್ಲ. ಆದರೆ, ಆ ವೇಳೆ ನಾನು ಅಸಹಾಯಕಳಾಗಿದ್ದೆ. ನನ್ನ ತಂದೆ ಯಾವ ತಪ್ಪು ಮಾಡಿಲ್ಲ ಎಂಬ ಭರವಸೆ ನನಗಿತ್ತು. ಅವರು ಆ ಸಂದರ್ಭದಲ್ಲಿ ಅಮಾಯಕರ ಜೀವ ಉಳಿಸಲು ತಮ್ಮ ಕೈಲಾದ ಪ್ರಯತ್ನವನ್ನೇ ಮಾಡಿದ್ದರು. ಆದರೆ ಯಾರೂ ಕೂಡ ಅದರ ಬಗ್ಗೆ ಮಾತನಾಡಲಿಲ್ಲ’ ಎಂದಿದ್ದಾರೆ. </p><p>‘ಅವರು ಜೈಲಿಗೆ ಹೋಗುವುದು, ಅಲ್ಲಿಂದ ಹೊರಬಂದು ಮತ್ತೆ ಜೈಲಿಗೆ ಹೋಗುವುದು ಮತ್ತೆ ಅಲ್ಲಿ ಮೂರು ವರ್ಷ ಇದ್ದು ಆಮೇಲೆ ಹೊರಗೆ ಬರುವುದು... ಇದೆಲ್ಲವನ್ನೂ ಅನುಭವಿಸುವಾಗ ಅವರಿಗೆ ಹೇಗನಿಸಿರಬಹುದು ಎಂಬುದನ್ನು ನನಗೆ ಕಲ್ಪಿಸಿಕೊಳ್ಳಲೂ ಆಗುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ ಸರಣಿ ಸ್ಫೋಟದ ಸಂದರ್ಭದಲ್ಲಿ ಸಂಜಯ್ ದತ್ ಅವರು ಎದುರಿಸಿದ ಸವಾಲುಗಳ ಬಗ್ಗೆ ಅವರ ಪುತ್ರಿ ತ್ರಿಶಾಲಾ ದತ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಬಗ್ಗೆ ‘ಎನ್ಡಿಟಿ‘ ವರದಿ ಮಾಡಿದೆ. </p><p>ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಸಂಜಯ್ ದತ್ ಅವರಿಗೆ ಸುಪ್ರೀಂ ಕೋರ್ಟ್ 5 ವರ್ಷ ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಡಿ ಅವರು ಪುಣೆಯ ಯರವಾಡ ಜೈಲಿನಲ್ಲಿ ಈ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರು. </p><p>ಈ ಕುರಿತು ಮಾತನಾಡಿರುವ ತ್ರಿಶಾಲಾ, ‘1993ರಲ್ಲಿ ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಅದೇ ವೇಳೆ ಕಾನೂನುಬಾಹಿರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪ ನನ್ನ ತಂದೆ ಮೇಲೆ ಬಂತು. ಆ ಘಟನೆಯ ಬಳಿಕ ನಮ್ಮ ಕುಟುಂಬಸ್ಥರನ್ನು ಜನರು ತೀವ್ರವಾಗಿ ಟೀಕೆ ಮಾಡಿದ್ದರು’ ಎಂದು ಹೇಳಿಕೊಂಡಿದ್ದಾರೆ.</p><p>ಮುಂಬೈ ಘಟನೆಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಚರ್ಚಿಸುವುದು ಸುಲಭದ ಮಾತಲ್ಲ. ಆದರೆ, ಆ ವೇಳೆ ನಾನು ಅಸಹಾಯಕಳಾಗಿದ್ದೆ. ನನ್ನ ತಂದೆ ಯಾವ ತಪ್ಪು ಮಾಡಿಲ್ಲ ಎಂಬ ಭರವಸೆ ನನಗಿತ್ತು. ಅವರು ಆ ಸಂದರ್ಭದಲ್ಲಿ ಅಮಾಯಕರ ಜೀವ ಉಳಿಸಲು ತಮ್ಮ ಕೈಲಾದ ಪ್ರಯತ್ನವನ್ನೇ ಮಾಡಿದ್ದರು. ಆದರೆ ಯಾರೂ ಕೂಡ ಅದರ ಬಗ್ಗೆ ಮಾತನಾಡಲಿಲ್ಲ’ ಎಂದಿದ್ದಾರೆ. </p><p>‘ಅವರು ಜೈಲಿಗೆ ಹೋಗುವುದು, ಅಲ್ಲಿಂದ ಹೊರಬಂದು ಮತ್ತೆ ಜೈಲಿಗೆ ಹೋಗುವುದು ಮತ್ತೆ ಅಲ್ಲಿ ಮೂರು ವರ್ಷ ಇದ್ದು ಆಮೇಲೆ ಹೊರಗೆ ಬರುವುದು... ಇದೆಲ್ಲವನ್ನೂ ಅನುಭವಿಸುವಾಗ ಅವರಿಗೆ ಹೇಗನಿಸಿರಬಹುದು ಎಂಬುದನ್ನು ನನಗೆ ಕಲ್ಪಿಸಿಕೊಳ್ಳಲೂ ಆಗುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>