<p>‘ತ್ರಿವಿಕ್ರಮ’ –ನಟ ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ನಟನೆಯ ಮೊದಲ ಚಿತ್ರ. ಈ ಸಿನಿಮಾ ನಿರ್ದೇಶಿಸುತ್ತಿರುವುದು ಸಹನಾಮೂರ್ತಿ. ಇದೊಂದು ಪಕ್ಕಾ ಲವ್ಸ್ಟೋರಿ ಚಿತ್ರ. ಜೊತೆಗೆ ಸೆಂಟಿಮೆಂಟ್, ಎಮೋಷನ್, ಸ್ನೇಹದ ಸುತ್ತ ಕಥೆ ಹೆಣೆಯಲಾಗಿದೆಯಂತೆ. ಕಾಮಿಡಿಯೂ ಹದವಾಗಿ ಬೆರೆತಿದೆ.</p>.<p>ಬೆಂಗಳೂರು, ಉಡುಪಿ, ಕೊಡಚಾದ್ರಿ, ತೀರ್ಥಹಳ್ಳಿ, ಸಾಗರದ ಸುತ್ತಮುತ್ತ ಮೂರನೇ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ನಾಲ್ಕನೇ ಹಂತದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ಹಾರಿದೆ. ಅಲ್ಲಿನ ಜೋಧ್ಪುರದಲ್ಲಿ ಕಳೆದ 10 ದಿನಗಳಿಂದಲೂ ಚಿತ್ರತಂಡ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದೆ.</p>.<p>ಅಲ್ಲಿನ ಮರಳುಗಾಡು ಸೇರಿದಂತೆ ಸುಂದರ ತಾಣಗಳಲ್ಲಿ ಹಾಡು ಮತ್ತು ಚಿತ್ರದ ಇತರೇ ಸನ್ನಿವೇಶಗಳ ಶೂಟಿಂಗ್ ನಡೆಯುತ್ತಿದೆ. ನಾಯಕ ವಿಕ್ರಮ್, ಬಾಲಿವುಡ್ ನಟ ರೋಹಿತ್ ರಾಯ್, ನಟಿ ಆಕಾಂಕ್ಷಾ ಹಾಗೂ ಸಾಧುಕೋಕಿಲ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರೀಕರಣ ಮುಗಿದ ಬಳಿಕ ತ್ರಿವಿಕ್ರಮನ ಸಂಚಾರ ಕಾಶ್ಮೀರದತ್ತ ಹೊರಡಲಿದೆ.</p>.<p>ಚಿತ್ರದ ಮೊದಲಾರ್ಧದಲ್ಲಿ ನಗಿಸಲು ಚಿಕ್ಕಣ್ಣ ಇದ್ದಾರೆ. ದ್ವಿತೀಯಾರ್ಧದಲ್ಲಿ ಸಾಧುಕೋಕಿಲ ಕಾಮಿಡಿ ಮೋಡಿ ಮಾಡಲಿದ್ದಾರಂತೆ. ಇದು ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.</p>.<p>ಗೌರಿ ಎಂಟರ್ಟೈನರ್ಸ್ ಲಾಂಛನದಡಿ ಸೋಮಣ್ಣ ಮತ್ತು ಸುರೇಶ್ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ. ರಾಜು ಸುಂದರಂ, ಪ್ರಭುದೇವ, ಕಲೈ ನೃತ್ಯ ನಿರ್ದೇಶಿಸಿದ್ದಾರೆ. ನಾಗು ಅವರ ಕಲಾ ನಿರ್ದೇಶನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ತ್ರಿವಿಕ್ರಮ’ –ನಟ ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ನಟನೆಯ ಮೊದಲ ಚಿತ್ರ. ಈ ಸಿನಿಮಾ ನಿರ್ದೇಶಿಸುತ್ತಿರುವುದು ಸಹನಾಮೂರ್ತಿ. ಇದೊಂದು ಪಕ್ಕಾ ಲವ್ಸ್ಟೋರಿ ಚಿತ್ರ. ಜೊತೆಗೆ ಸೆಂಟಿಮೆಂಟ್, ಎಮೋಷನ್, ಸ್ನೇಹದ ಸುತ್ತ ಕಥೆ ಹೆಣೆಯಲಾಗಿದೆಯಂತೆ. ಕಾಮಿಡಿಯೂ ಹದವಾಗಿ ಬೆರೆತಿದೆ.</p>.<p>ಬೆಂಗಳೂರು, ಉಡುಪಿ, ಕೊಡಚಾದ್ರಿ, ತೀರ್ಥಹಳ್ಳಿ, ಸಾಗರದ ಸುತ್ತಮುತ್ತ ಮೂರನೇ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ನಾಲ್ಕನೇ ಹಂತದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ಹಾರಿದೆ. ಅಲ್ಲಿನ ಜೋಧ್ಪುರದಲ್ಲಿ ಕಳೆದ 10 ದಿನಗಳಿಂದಲೂ ಚಿತ್ರತಂಡ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದೆ.</p>.<p>ಅಲ್ಲಿನ ಮರಳುಗಾಡು ಸೇರಿದಂತೆ ಸುಂದರ ತಾಣಗಳಲ್ಲಿ ಹಾಡು ಮತ್ತು ಚಿತ್ರದ ಇತರೇ ಸನ್ನಿವೇಶಗಳ ಶೂಟಿಂಗ್ ನಡೆಯುತ್ತಿದೆ. ನಾಯಕ ವಿಕ್ರಮ್, ಬಾಲಿವುಡ್ ನಟ ರೋಹಿತ್ ರಾಯ್, ನಟಿ ಆಕಾಂಕ್ಷಾ ಹಾಗೂ ಸಾಧುಕೋಕಿಲ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರೀಕರಣ ಮುಗಿದ ಬಳಿಕ ತ್ರಿವಿಕ್ರಮನ ಸಂಚಾರ ಕಾಶ್ಮೀರದತ್ತ ಹೊರಡಲಿದೆ.</p>.<p>ಚಿತ್ರದ ಮೊದಲಾರ್ಧದಲ್ಲಿ ನಗಿಸಲು ಚಿಕ್ಕಣ್ಣ ಇದ್ದಾರೆ. ದ್ವಿತೀಯಾರ್ಧದಲ್ಲಿ ಸಾಧುಕೋಕಿಲ ಕಾಮಿಡಿ ಮೋಡಿ ಮಾಡಲಿದ್ದಾರಂತೆ. ಇದು ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.</p>.<p>ಗೌರಿ ಎಂಟರ್ಟೈನರ್ಸ್ ಲಾಂಛನದಡಿ ಸೋಮಣ್ಣ ಮತ್ತು ಸುರೇಶ್ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ. ರಾಜು ಸುಂದರಂ, ಪ್ರಭುದೇವ, ಕಲೈ ನೃತ್ಯ ನಿರ್ದೇಶಿಸಿದ್ದಾರೆ. ನಾಗು ಅವರ ಕಲಾ ನಿರ್ದೇಶನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>