ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್ ರಾಜ್ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ನಟನೆಯ ಯುವರತ್ನ ಚಿತ್ರವು ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದ ಕಾರಣ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.