<p>ತಾರಕ್ ಪೊನ್ನಪ್ಪ ಮತ್ತು ಊರ್ವಶಿ ಗೋವರ್ಧನ ಅವರು ಪ್ರಧಾನ ಭೂಮಿಕೆಯಲ್ಲಿರುವ ‘ಅಮೃತ್ ಅಪಾರ್ಟ್ಮೆಂಟ್ಸ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಚಿತ್ರಮಂದಿರಗಳ ಚಟುವಟಿಕೆ ಸಹಜ ಸ್ಥಿತಿಗೆ ಮರಳಿದ ನಂತರ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆ.</p>.<p>ಜಿ-9 ಕಮ್ಯುನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ರಚಿಸಿ, ನಿರ್ಮಿಸಿ ಹಾಗೂ ನಿರ್ದೇಶಿಸಿದ್ದಾರೆ ಈ ಚಿತ್ರವನ್ನು. ‘ಇಡೀ ಚಿತ್ರ ತಾಜಾತನದಿಂದ ಕೂಡಿದ್ದು, ತುಂಬಾ ಮನರಂಜನೆ ನೀಡುವಂತಿದೆ. ಚಿತ್ರದ ಕಥೆಯೂ ಕುತೂಹಲಕಾರಿಯಾಗಿದ್ದು, ಕುಟುಂಬ ಸಮೇತ ಪ್ರೇಕ್ಷಕರು ಚಿತ್ರ ವೀಕ್ಷಿಸಬಹುದು’ ಎನ್ನುವುದು ಅವರ ಆಂಬೋಣ.</p>.<p>ಬಾಲಾಜಿ ಮನೋಹರ ಆಟೋ ಚಾಲಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಂಪತ್ ಕುಮಾರ, ಮಾನಸ ಜೋಷಿ, ಸೀತಾ ಕೋಟೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಭೂಮಿ ಕಲಾವಿದರಾದ, ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ ಜಾಲಾ, ರಂಗಸ್ವಾಮಿ, ಶಂಕರ ಶೆಟ್ಟಿ, ವೈಷ್ಣವಿ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.</p>.<p>ಅರ್ಜುನ್ ಅಜಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಸಂಕಲನ, ಮೂರು ಗೀತೆಗಳಿಗೆ ಎಸ್.ಡಿ. ಅರವಿಂದ್ ಸಂಗೀತ ಸಂಯೋಜನೆ, ಎ.ಎಂ. ಶಾ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಸೌಂಡ್ ಡಿಸೈನರ್ ರಾಜನ್ ವಿಶೇಷ ಎಫೆಕ್ಟ್ಸ್ಗಳನ್ನು ಈ ಚಿತ್ರಕ್ಕಾಗಿಯೇ ಬಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾರಕ್ ಪೊನ್ನಪ್ಪ ಮತ್ತು ಊರ್ವಶಿ ಗೋವರ್ಧನ ಅವರು ಪ್ರಧಾನ ಭೂಮಿಕೆಯಲ್ಲಿರುವ ‘ಅಮೃತ್ ಅಪಾರ್ಟ್ಮೆಂಟ್ಸ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಚಿತ್ರಮಂದಿರಗಳ ಚಟುವಟಿಕೆ ಸಹಜ ಸ್ಥಿತಿಗೆ ಮರಳಿದ ನಂತರ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆ.</p>.<p>ಜಿ-9 ಕಮ್ಯುನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ರಚಿಸಿ, ನಿರ್ಮಿಸಿ ಹಾಗೂ ನಿರ್ದೇಶಿಸಿದ್ದಾರೆ ಈ ಚಿತ್ರವನ್ನು. ‘ಇಡೀ ಚಿತ್ರ ತಾಜಾತನದಿಂದ ಕೂಡಿದ್ದು, ತುಂಬಾ ಮನರಂಜನೆ ನೀಡುವಂತಿದೆ. ಚಿತ್ರದ ಕಥೆಯೂ ಕುತೂಹಲಕಾರಿಯಾಗಿದ್ದು, ಕುಟುಂಬ ಸಮೇತ ಪ್ರೇಕ್ಷಕರು ಚಿತ್ರ ವೀಕ್ಷಿಸಬಹುದು’ ಎನ್ನುವುದು ಅವರ ಆಂಬೋಣ.</p>.<p>ಬಾಲಾಜಿ ಮನೋಹರ ಆಟೋ ಚಾಲಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಂಪತ್ ಕುಮಾರ, ಮಾನಸ ಜೋಷಿ, ಸೀತಾ ಕೋಟೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಭೂಮಿ ಕಲಾವಿದರಾದ, ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ ಜಾಲಾ, ರಂಗಸ್ವಾಮಿ, ಶಂಕರ ಶೆಟ್ಟಿ, ವೈಷ್ಣವಿ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.</p>.<p>ಅರ್ಜುನ್ ಅಜಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಸಂಕಲನ, ಮೂರು ಗೀತೆಗಳಿಗೆ ಎಸ್.ಡಿ. ಅರವಿಂದ್ ಸಂಗೀತ ಸಂಯೋಜನೆ, ಎ.ಎಂ. ಶಾ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಸೌಂಡ್ ಡಿಸೈನರ್ ರಾಜನ್ ವಿಶೇಷ ಎಫೆಕ್ಟ್ಸ್ಗಳನ್ನು ಈ ಚಿತ್ರಕ್ಕಾಗಿಯೇ ಬಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>