<p>ತ್ರಿಭಾಷೆಗಳಲ್ಲಿ ನಿರ್ಮಾಣವಾಗಿರುವ ‘ತ್ರಿಕೋನ’ ಚಿತ್ರಕ್ಕೆ ಕನ್ನಡದಲ್ಲಿಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಲಾಕ್ಡೌನ್ ತೆರವಾಗಿ ಚಿತ್ರಮಂದಿರ ಬಾಗಿಲು ತೆರೆದ ತಕ್ಷಣ ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ಯೋಜನೆ ರೂಪಿಸಿದೆ.</p>.<p>ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜತೆಗೆರಾಜಶೇಖರ್ ಅವರೇ ಕಥೆ ಬರೆದಿದ್ದಾರೆ. ‘143’ ಚಿತ್ರದ ಖ್ಯಾತಿಯ ಚಂದ್ರಕಾಂತ್ ನಿರ್ದೇಶನ ಮಾಡಿದ್ದಾರೆ.</p>.<p>ಚಿತ್ರಕ್ಕೆ ಯಾವುದೇ ಕತ್ತರಿ ಹಾಕದೆ, ಸೌಂಡ್ ಮ್ಯೂಟ್ ಸಹ ನೀಡದೆ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರ ನೀಡಿದೆ.ತೆಲುಗು, ತಮಿಳಿನಲ್ಲೂ ಸದ್ಯದಲ್ಲೇ ಸೆನ್ಸಾರ್ ಆಗಲಿದೆ.ಮೂರು ಭಾಷೆಗಳಲ್ಲಿ ಮೂರು ಬೇರೆ ಚಿತ್ರಕಥೆಯೊಂದಿಗೆ ಚಿತ್ರ ನಿರ್ಮಿಸಿರುವುದು ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಪ್ರಯತ್ನ ಎಂದಿದ್ದಾರೆ ನಿರ್ಮಾಪಕ ರಾಜಶೇಖರ್.</p>.<p>ಸುರೇಂದ್ರನಾಥ್ ಸಂಗೀತ ನಿರ್ದೇಶನ, ಶ್ರೀನಿವಾಸ್ ವೆನಕೋಟ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ಜಾನಿ, ಚೇತನ್ ಡಿಸೋಜ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ ಕುಮಾರ್, ಸುಧಾರಾಣಿ, ಸಾಧುಕೋಕಿಲ, ಭಜರಂಗಿ ಮಾರುತೇಶ್, ರಾಜವೀರ್, ಅದಿತಿ ರಾಜ್, ಹಾಸಿನಿ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ರಿಭಾಷೆಗಳಲ್ಲಿ ನಿರ್ಮಾಣವಾಗಿರುವ ‘ತ್ರಿಕೋನ’ ಚಿತ್ರಕ್ಕೆ ಕನ್ನಡದಲ್ಲಿಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಲಾಕ್ಡೌನ್ ತೆರವಾಗಿ ಚಿತ್ರಮಂದಿರ ಬಾಗಿಲು ತೆರೆದ ತಕ್ಷಣ ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ಯೋಜನೆ ರೂಪಿಸಿದೆ.</p>.<p>ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜತೆಗೆರಾಜಶೇಖರ್ ಅವರೇ ಕಥೆ ಬರೆದಿದ್ದಾರೆ. ‘143’ ಚಿತ್ರದ ಖ್ಯಾತಿಯ ಚಂದ್ರಕಾಂತ್ ನಿರ್ದೇಶನ ಮಾಡಿದ್ದಾರೆ.</p>.<p>ಚಿತ್ರಕ್ಕೆ ಯಾವುದೇ ಕತ್ತರಿ ಹಾಕದೆ, ಸೌಂಡ್ ಮ್ಯೂಟ್ ಸಹ ನೀಡದೆ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರ ನೀಡಿದೆ.ತೆಲುಗು, ತಮಿಳಿನಲ್ಲೂ ಸದ್ಯದಲ್ಲೇ ಸೆನ್ಸಾರ್ ಆಗಲಿದೆ.ಮೂರು ಭಾಷೆಗಳಲ್ಲಿ ಮೂರು ಬೇರೆ ಚಿತ್ರಕಥೆಯೊಂದಿಗೆ ಚಿತ್ರ ನಿರ್ಮಿಸಿರುವುದು ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಪ್ರಯತ್ನ ಎಂದಿದ್ದಾರೆ ನಿರ್ಮಾಪಕ ರಾಜಶೇಖರ್.</p>.<p>ಸುರೇಂದ್ರನಾಥ್ ಸಂಗೀತ ನಿರ್ದೇಶನ, ಶ್ರೀನಿವಾಸ್ ವೆನಕೋಟ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ಜಾನಿ, ಚೇತನ್ ಡಿಸೋಜ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ ಕುಮಾರ್, ಸುಧಾರಾಣಿ, ಸಾಧುಕೋಕಿಲ, ಭಜರಂಗಿ ಮಾರುತೇಶ್, ರಾಜವೀರ್, ಅದಿತಿ ರಾಜ್, ಹಾಸಿನಿ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>