ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ‘ಭಾರ್ಗವ್ ಭಕ್ಷಿ’ ಎಂಬ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಕಬ್ಜ’ ಕೋಟೆಯಲ್ಲಿ ‘ಮಧುಮತಿ’ಯಾಗಿ ಬಹುಭಾಷಾ ನಟಿ ಶ್ರಿಯಾ ಸರಣ್ ಬಣ್ಣಹಚ್ಚಿದ್ದಾರೆ. ಬಾಲಿವುಡ್ನ ಖ್ಯಾತ ನಟ ನವಾಬ್ ಶಾ ಹಾಗೂ ಕೆ.ಜಿ.ಎಫ್ ಸಿನಿಮಾದಲ್ಲಿ ರಾಜೇಂದ್ರ ದೇಸಾಯಿ ಪಾತ್ರ ನಿರ್ವಹಿಸಿದ್ದ ಲಕ್ಷ್ಮೀಶ ಲಕ್ಷ್ಮಣ್, ತಮಿಳಿನ ‘ಐ’ ಚಿತ್ರದ ಖ್ಯಾತಿಯ ಕಾಮರಾಜನ್, ಜಗಪತಿ ಬಾಬು, ರಾಹುಲ್ ದೇವ್, ಸುನೀಲ್ ಪುರಾಣಿಕ್, ಪ್ರಮೋದ್ ಶೆಟ್ಟಿ, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.