ಹಿರಿಯ ಕಲಾವಿದರಾದ ಎಂ.ಎನ್.ಲಕ್ಷ್ಮೀದೇವಿ, ಅಶೋಕ್, ಸಾಧು ಕೋಕಿಲ, ನವೀನ್ ಡಿ. ಪಡೀಲ್, ಹುಲಿ ಕಾರ್ತಿಕ್ ಅಭಿನಯಿಸಿದ್ದಾರೆ. ಚಿತ್ರದಲ್ಲಿ 3 ಹಾಡುಗಳಿವೆ. ಶೀರ್ಷಿಕೆ ಗೀತೆಯನ್ನು ಚಂದನ್ ಶೆಟ್ಟಿ ಹಾಡಿದ್ದಾರೆ. ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ. ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ದರ್ಬಾರ್ ಪ್ರೊಡಕ್ಷನ್ಸ್ ಮೂಲಕ ಬಿ.ಎನ್. ಶಿಲ್ಪಾ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು ಚಿತ್ರದಲ್ಲಿವೆ. ಮಂಡ್ಯ, ಮದ್ದೂರು ಹಾಗೂ ಕೋಲಾರ ಸಮೀಪದ ಮಾಲೂರಿನಲ್ಲಿ ಚಿತ್ರೀಕರಣ ನಡೆದಿದೆ. ಏಪ್ರಿಲ್ನಲ್ಲಿ ಈ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ.