<p>ಯೂ ಟರ್ನ್-2, ರಾಮು ಆ್ಯಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಅದುವೇ ‘ವೈಭೋಗ.’ ಈಚೆಗೆ ಅದರ ಪೋಸ್ಟರ್ ಬಿಡುಗಡೆ ಮಾಡಲಾಯಿತು.</p><p> ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು, ಇದೊಂದು ಕಮರ್ಷಿಯಲ್ ಸಿನಿಮಾ. ಯೌವ್ವನದಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಪ್ರೀತಿಯನ್ನು ಮರೆಯಬಾರದು. ಪ್ರೀತಿಯ ಜತೆಗೆ ಹೆತ್ತವರನ್ನು ಕಾಪಾಡಬೇಕು ಎಂಬ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಹೇಳಿದರು. ಶ್ರೇಯಸ್ ಮತ್ತು ಸಂಜನಾ ಕದಂ ನಾಯಕ, ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ತಿಂಗಳ 20ರಿಂದ ಚನ್ನಪಟ್ಟಣ, ಮೈಸೂರು ಸುತ್ತಮುತ್ತ ಶೂಟಿಂಗ್ ನಡೆಯಲಿದೆ. ಹತ್ತು ದಿನದಲ್ಲಿ ಹಾಡು, ಫೈಟ್ಗಳನ್ನು ಚಿತ್ರೀಕರಿಸುವ ಉದ್ದೇಶವಿದೆ. ಈಗಾಗಲೇ ರಾಮು ಅಂಡ್ ರಾಮು ಚಿತ್ರ ಸೆನ್ಸಾರ್ ಆಗಿದೆ. ಇನ್ನು ‘ಕರೀಮಣಿ ಮಾಲೀಕ’ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಿದರು. </p><p>ನಾಯಕ ಶ್ರೇಯಸ್ ಮಾತನಾಡಿ, ನಿರ್ದೇಶಕ ಓಬಯ್ಯ ಅವರು ನನಗಿನ್ನೂ ಕಥೆ ಹೇಳಿಲ್ಲ. ಒಳ್ಳೆಯ ಚಿತ್ರವಾಗುವ ವಿಶ್ವಾಸವಿದೆ ಎಂದು ಹೇಳಿದರು.</p><p>ನಾಯಕಿ ಸಂಜನಾ ಕದಂ ಮಾತನಾಡಿ, ರಂಗಭೂಮಿ ಕಲಾವಿದೆ. ಮೈಸೂರಿನ ಹುಡುಗಿ, ಮಂಡ್ಯ ರಮೇಶ್ ಅವರ ನಟನಾದಲ್ಲಿ ಅಭಿನಯ ಕಲಿತಿದ್ದೇನೆ. ಮೊದಲ ಬಾರಿಗೆ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎಂದರು.</p><p>ಹಿರಿಯ ಕಲಾವಿದ ನಾಗೇಂದ್ರ ಅರಸ್ ಮಾತನಾಡಿ, ಕಿರಿತೆರೆಯಲ್ಲಿ ಬರುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಾಯಕಿಯ ಅಪ್ಪನ ಪಾತ್ರ ಮಾಡಿದ್ದೆ. ಈ ಚಿತ್ರದಲ್ಲಿ ನಾಯಕನ ಅಪ್ಪನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು. ಡಾ.ಚೇತನ್ ನಿಂಗೇಗೌಡ ನಿರ್ಮಾಣವಿದೆ. ಛಾಯಾಗ್ರಾಹಕ ನಿರಂಜನ್ ಬೋಪಣ್ಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯೂ ಟರ್ನ್-2, ರಾಮು ಆ್ಯಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಅದುವೇ ‘ವೈಭೋಗ.’ ಈಚೆಗೆ ಅದರ ಪೋಸ್ಟರ್ ಬಿಡುಗಡೆ ಮಾಡಲಾಯಿತು.</p><p> ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು, ಇದೊಂದು ಕಮರ್ಷಿಯಲ್ ಸಿನಿಮಾ. ಯೌವ್ವನದಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಪ್ರೀತಿಯನ್ನು ಮರೆಯಬಾರದು. ಪ್ರೀತಿಯ ಜತೆಗೆ ಹೆತ್ತವರನ್ನು ಕಾಪಾಡಬೇಕು ಎಂಬ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಹೇಳಿದರು. ಶ್ರೇಯಸ್ ಮತ್ತು ಸಂಜನಾ ಕದಂ ನಾಯಕ, ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ತಿಂಗಳ 20ರಿಂದ ಚನ್ನಪಟ್ಟಣ, ಮೈಸೂರು ಸುತ್ತಮುತ್ತ ಶೂಟಿಂಗ್ ನಡೆಯಲಿದೆ. ಹತ್ತು ದಿನದಲ್ಲಿ ಹಾಡು, ಫೈಟ್ಗಳನ್ನು ಚಿತ್ರೀಕರಿಸುವ ಉದ್ದೇಶವಿದೆ. ಈಗಾಗಲೇ ರಾಮು ಅಂಡ್ ರಾಮು ಚಿತ್ರ ಸೆನ್ಸಾರ್ ಆಗಿದೆ. ಇನ್ನು ‘ಕರೀಮಣಿ ಮಾಲೀಕ’ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಿದರು. </p><p>ನಾಯಕ ಶ್ರೇಯಸ್ ಮಾತನಾಡಿ, ನಿರ್ದೇಶಕ ಓಬಯ್ಯ ಅವರು ನನಗಿನ್ನೂ ಕಥೆ ಹೇಳಿಲ್ಲ. ಒಳ್ಳೆಯ ಚಿತ್ರವಾಗುವ ವಿಶ್ವಾಸವಿದೆ ಎಂದು ಹೇಳಿದರು.</p><p>ನಾಯಕಿ ಸಂಜನಾ ಕದಂ ಮಾತನಾಡಿ, ರಂಗಭೂಮಿ ಕಲಾವಿದೆ. ಮೈಸೂರಿನ ಹುಡುಗಿ, ಮಂಡ್ಯ ರಮೇಶ್ ಅವರ ನಟನಾದಲ್ಲಿ ಅಭಿನಯ ಕಲಿತಿದ್ದೇನೆ. ಮೊದಲ ಬಾರಿಗೆ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎಂದರು.</p><p>ಹಿರಿಯ ಕಲಾವಿದ ನಾಗೇಂದ್ರ ಅರಸ್ ಮಾತನಾಡಿ, ಕಿರಿತೆರೆಯಲ್ಲಿ ಬರುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಾಯಕಿಯ ಅಪ್ಪನ ಪಾತ್ರ ಮಾಡಿದ್ದೆ. ಈ ಚಿತ್ರದಲ್ಲಿ ನಾಯಕನ ಅಪ್ಪನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು. ಡಾ.ಚೇತನ್ ನಿಂಗೇಗೌಡ ನಿರ್ಮಾಣವಿದೆ. ಛಾಯಾಗ್ರಾಹಕ ನಿರಂಜನ್ ಬೋಪಣ್ಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>