<p><strong>ಹೈದರಾಬಾದ್</strong>: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ವಾರಾಣಸಿ‘ 2027ರ ಸಂಕ್ರಾಂತಿಗೆ ತೆರೆ ಕಾಣಲಿದೆ. ರುದ್ರನಾಗಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ.</p><p>ಶನಿವಾರ ಸಂಜೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು.</p>.ರಾಜಸ್ಥಾನ | ಟೆಂಪೊ–ಟ್ರಕ್ ಡಿಕ್ಕಿ: 6 ಮಂದಿ ಯಾತ್ರಿಕರು ಸಾವು, 14 ಮಂದಿಗೆ ಗಾಯ.ಭಯೋತ್ಪಾದನಾ ಜಾಲ: ಜಮ್ಮು-ಕಾಶ್ಮೀರದ ಅನಂತ್ನಾಗ್ನಲ್ಲಿ ವೈದ್ಯರ ಮನೆ ಮೇಲೆ ದಾಳಿ. <p>ಇದೇ ಕಾರ್ಯಕ್ರಮದಲ್ಲಿ ಚಿತ್ರದ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು. ವಾರಾಣಸಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರ ಚಿತ್ರೀಕರಿಸಲಾಗುತ್ತಿದ್ದು, ತ್ರೇತಾಯುಗಕ್ಕೆ ಸಂಬಂಧಿಸಿದ ಕಥೆಯ ಜತೆಗೆ ರಾಜಮೌಳಿ ವಿಭಿನ್ನವಾಗಿ ಚಿತ್ರೀಕರಿಸಲಾಗುತ್ತಿದೆ. </p><p>ಮಹೇಶ್ ಬಾಬು ಅವರು ರುದ್ರನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಕ್ತಸಿಕ್ತ ಅಂಗಿಯೊಂದಿಗೆ ನಂದಿ ಪೆಂಡೆಂಟ್ ಧರಿಸಿ ಮಹೇಶ್ ಬಾಬು ಗೂಳಿಯ ಮೇಲೆ ಸವಾರಿ ಮಾಡುತ್ತಾ ತ್ರಿಶೂಲವನ್ನು ಹಿಡಿದು ವಾರಾಣಸಿಯಲ್ಲಿ ಕಾಣಿಸಿಕೊಳ್ಳುವ ದೃಶ್ಯಗಳು ಟೀಸರ್ನಲ್ಲಿವೆ.</p>.ಮೇಯರ್ ಹತ್ಯೆಗೆ ಖಂಡನೆ: ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ.ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಕ್ಷಣಗಣನೆ; ಪೊಲೀಸ್ ಸರ್ಪಗಾವಲು. <p>ಅಥಡು, ಪೋಕಿರಿ ಮತ್ತು ದೂಕುಡು ಸಿನಿಮಾಗಳ ಮೂಲಕ ಹೆಚ್ಚು ಖ್ಯಾತಿಗಳಿಸಿರುವ ಮಹೇಶ್ ಬಾಬು ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನನ್ನ ಮೇಲೆ ಇಷ್ಟು ಪ್ರೀತಿಯಿಟ್ಟು, ನನ್ನ ಸಿನಿಮಾಗಳ ಯಶಸ್ಸಿಗೆ ಕಾರಣರಾದ ಅಭಿಮಾನಿಗಳಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.</p><p>ವಾರಾಣಸಿ ನನ್ನ ಕನಸಿನ ಚಿತ್ರ ಎಂದ ಮಹೇಶ್ ಬಾಬು, ನನ್ನ ತಂದೆಯವರಿಗೆ ನಾನು ಪೌರಾಣಿಕ ಪಾತ್ರಕ್ಕೆ ಜೀವ ತುಂಬಬೇಕೆಂಬ ಆಸೆ ಇತ್ತು ಎಂದಿದ್ದಾರೆ.</p>.ದೆಹಲಿ ಗಾಳಿಯ ಗುಣಮಟ್ಟ ‘ಅತ್ಯಂತ ಕಳಪೆ’: 385ಕ್ಕೆ ತಲುಪಿದ AQI ಸೂಚ್ಯಂಕ.Varanasi | ರಾಜಕುಮಾರಿಯಂತೆ ಮಿಂಚಿದ ಪ್ರಿಯಾಂಕಾ ಚೋಪ್ರಾ: ಚಿತ್ರಗಳಲ್ಲಿ ನೋಡಿ. <p>ರಾಜಮೌಳಿ ಅವರ ತಂದೆ ಎಸ್ಎಸ್ ವಿಜಯೇಂದ್ರ ಪ್ರಸಾದ್ ಅವರ ಕಥೆ ಹೊಂದಿರುವ ಈ ಹೊಸ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಆಫ್ರಿಕಾದ ದಟ್ಟ ಕಾಡುಗಳಲ್ಲಿ ಚಿತ್ರೀಕರಣವಾಗುತ್ತಿದೆ. ಇತ್ತೀಚೆಗೆ ಶೂಟಿಂಗ್ನ ವಿಡಿಯೊ ತುಣಕೊಂದು ಸೋರಿಕೆಯಾಗಿದ್ದು ವೈರಲ್ ಆಗಿದೆ.</p><p>ಇನ್ನು, ಮೊನ್ನೆಯಷ್ಟೇ ರಾಜಮೌಳಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಾಗಿರುವ ಕುಂಭನ ಪರಿಚಯವನ್ನು ಹಾಗೂ ಮಂದಾಕಿನಿ ಪರಿಚಯ ಮಾಡಿದ್ದರು. ಕುಂಭನಾಗಿ ಪೃಥ್ವಿರಾಜ್ ಸುಕುಮಾರನ್, ಮಂದಾಕಿನಿಯಾಗಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದು ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ವಾರಾಣಸಿ‘ 2027ರ ಸಂಕ್ರಾಂತಿಗೆ ತೆರೆ ಕಾಣಲಿದೆ. ರುದ್ರನಾಗಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ.</p><p>ಶನಿವಾರ ಸಂಜೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು.</p>.ರಾಜಸ್ಥಾನ | ಟೆಂಪೊ–ಟ್ರಕ್ ಡಿಕ್ಕಿ: 6 ಮಂದಿ ಯಾತ್ರಿಕರು ಸಾವು, 14 ಮಂದಿಗೆ ಗಾಯ.ಭಯೋತ್ಪಾದನಾ ಜಾಲ: ಜಮ್ಮು-ಕಾಶ್ಮೀರದ ಅನಂತ್ನಾಗ್ನಲ್ಲಿ ವೈದ್ಯರ ಮನೆ ಮೇಲೆ ದಾಳಿ. <p>ಇದೇ ಕಾರ್ಯಕ್ರಮದಲ್ಲಿ ಚಿತ್ರದ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು. ವಾರಾಣಸಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರ ಚಿತ್ರೀಕರಿಸಲಾಗುತ್ತಿದ್ದು, ತ್ರೇತಾಯುಗಕ್ಕೆ ಸಂಬಂಧಿಸಿದ ಕಥೆಯ ಜತೆಗೆ ರಾಜಮೌಳಿ ವಿಭಿನ್ನವಾಗಿ ಚಿತ್ರೀಕರಿಸಲಾಗುತ್ತಿದೆ. </p><p>ಮಹೇಶ್ ಬಾಬು ಅವರು ರುದ್ರನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಕ್ತಸಿಕ್ತ ಅಂಗಿಯೊಂದಿಗೆ ನಂದಿ ಪೆಂಡೆಂಟ್ ಧರಿಸಿ ಮಹೇಶ್ ಬಾಬು ಗೂಳಿಯ ಮೇಲೆ ಸವಾರಿ ಮಾಡುತ್ತಾ ತ್ರಿಶೂಲವನ್ನು ಹಿಡಿದು ವಾರಾಣಸಿಯಲ್ಲಿ ಕಾಣಿಸಿಕೊಳ್ಳುವ ದೃಶ್ಯಗಳು ಟೀಸರ್ನಲ್ಲಿವೆ.</p>.ಮೇಯರ್ ಹತ್ಯೆಗೆ ಖಂಡನೆ: ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ.ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಕ್ಷಣಗಣನೆ; ಪೊಲೀಸ್ ಸರ್ಪಗಾವಲು. <p>ಅಥಡು, ಪೋಕಿರಿ ಮತ್ತು ದೂಕುಡು ಸಿನಿಮಾಗಳ ಮೂಲಕ ಹೆಚ್ಚು ಖ್ಯಾತಿಗಳಿಸಿರುವ ಮಹೇಶ್ ಬಾಬು ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನನ್ನ ಮೇಲೆ ಇಷ್ಟು ಪ್ರೀತಿಯಿಟ್ಟು, ನನ್ನ ಸಿನಿಮಾಗಳ ಯಶಸ್ಸಿಗೆ ಕಾರಣರಾದ ಅಭಿಮಾನಿಗಳಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.</p><p>ವಾರಾಣಸಿ ನನ್ನ ಕನಸಿನ ಚಿತ್ರ ಎಂದ ಮಹೇಶ್ ಬಾಬು, ನನ್ನ ತಂದೆಯವರಿಗೆ ನಾನು ಪೌರಾಣಿಕ ಪಾತ್ರಕ್ಕೆ ಜೀವ ತುಂಬಬೇಕೆಂಬ ಆಸೆ ಇತ್ತು ಎಂದಿದ್ದಾರೆ.</p>.ದೆಹಲಿ ಗಾಳಿಯ ಗುಣಮಟ್ಟ ‘ಅತ್ಯಂತ ಕಳಪೆ’: 385ಕ್ಕೆ ತಲುಪಿದ AQI ಸೂಚ್ಯಂಕ.Varanasi | ರಾಜಕುಮಾರಿಯಂತೆ ಮಿಂಚಿದ ಪ್ರಿಯಾಂಕಾ ಚೋಪ್ರಾ: ಚಿತ್ರಗಳಲ್ಲಿ ನೋಡಿ. <p>ರಾಜಮೌಳಿ ಅವರ ತಂದೆ ಎಸ್ಎಸ್ ವಿಜಯೇಂದ್ರ ಪ್ರಸಾದ್ ಅವರ ಕಥೆ ಹೊಂದಿರುವ ಈ ಹೊಸ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಆಫ್ರಿಕಾದ ದಟ್ಟ ಕಾಡುಗಳಲ್ಲಿ ಚಿತ್ರೀಕರಣವಾಗುತ್ತಿದೆ. ಇತ್ತೀಚೆಗೆ ಶೂಟಿಂಗ್ನ ವಿಡಿಯೊ ತುಣಕೊಂದು ಸೋರಿಕೆಯಾಗಿದ್ದು ವೈರಲ್ ಆಗಿದೆ.</p><p>ಇನ್ನು, ಮೊನ್ನೆಯಷ್ಟೇ ರಾಜಮೌಳಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಾಗಿರುವ ಕುಂಭನ ಪರಿಚಯವನ್ನು ಹಾಗೂ ಮಂದಾಕಿನಿ ಪರಿಚಯ ಮಾಡಿದ್ದರು. ಕುಂಭನಾಗಿ ಪೃಥ್ವಿರಾಜ್ ಸುಕುಮಾರನ್, ಮಂದಾಕಿನಿಯಾಗಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದು ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>