ಮುಖ್ಯ ಭೂಮಿಕೆಯಲ್ಲಿ ರೋಹಿತ್ ಶ್ರೀಧರ್, ಭಾವನ ಶ್ರೀನಿವಾಸ್, ಜೀವಿತಾ ವಸಿಷ್ಠ ನಟಿಸಿದ್ದಾರೆ. ಜೇನುಗೂಡು ಬ್ಯಾನರ್ ಅಡಿ ಸಿನಿಮಾ ನಿರ್ಮಾಣವಾಗಿದ್ದು, ಜೇನುಗೂಡು ಕೆ.ಎನ್ ಶ್ರೀಧರ್ ಬಂಡವಾಳ ಹೂಡಿದ್ದು, ರವೀಂದ್ರ ವಂಶಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ರವೀಂದ್ರ ವಂಶಿ ಈ ಹಿಂದೆ ಪುಟಾಣಿ ಸಫಾರಿ, ವರ್ಣಮಯ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ರೋಮ್ಯಾಂಟಿಕ್ ಕಥಾಹಂದರ, ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಬ್ಜೆಕ್ಟ್ ಹೊತ್ತು ಹೊಸ ಪ್ರತಿಭೆಗಳೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಸೆಪ್ಟೆಂಬರ್ ಎರಡನೇ ವಾರದಲ್ಲಿ ಸಿನಿಮಾ ತೆರೆಕಾಣಲಿದೆ.