ದೇವರಾಜ್ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಸಾಹಿತ್ಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ರಾಘವ್ ಸುಭಾಷ್ ಸಂಗೀತ ನೀಡಲಿದ್ದಾರೆ. ಸುಭಾಷ್ ಬೆಟಗೇರಿ ಅವರ ಸಾಹಿತ್ಯವಿದೆ. ಸಾಗರ್ ಗುಲ್ಬರ್ಗ ನೃತ್ಯ ಸಂಯೋಜಿಸಲಿದ್ದಾರೆ. ಚಿತ್ರದ ನಾಯಕ, ನಾಯಕಿ, ಪೋಷಕ ಕಲಾವಿದರ ಪಾತ್ರಗಳಿಗೆ ಆಯ್ಕೆ ನಡೆಯುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.