ಈ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸಮೂರ್ತಿ ಅವರೇ ಈ ಮಾಹಿತಿ ನೀಡಿದರು. ’ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬಂದು ಸರ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೆ. ಆ ವೇಳೆ ನಾಟಕದಲ್ಲಿ ಅಭಿನಯಿಸಲು ಪ್ರಾರಂಭ ಮಾಡಿದೆ. ಒಂದು ಸಲ ನನ್ನ ನಾಟಕವನ್ನು ನೋಡಿದ ಬಂಗಾರಪ್ಪನವರು ನನ್ನನ್ನು ಅಭಿನಂದಿಸಿದರು. ಅಲ್ಲಿಂದ ನನ್ನ ನಟನೆ ಮತ್ತಷ್ಟು ಹೆಚ್ಚಾಯಿತು’ ಎನ್ನುತ್ತಾ ತಮ್ಮ ಬಣ್ಣದ ಬದುಕಿನ ಆರಂಭದ ದಿನಗಳನ್ನು ನೆನಪಿಸಿಕೊಂಡರು.