ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಿದುಳಿಗೆ ಮತ್ತಷ್ಟು ಹಾನಿಯಾಗಿದ್ದು, ರಕ್ತದೊತ್ತಡ ಹೆಚ್ಚಾಗಿದೆ. ವೆಂಟಿಲೇಟರ್ನಲ್ಲೇ ಶಿವರಾಂ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಮೂತ್ರಪಿಂಡ, ಪಿತ್ತಕೋಶ ಎಲ್ಲವೂ ಕಾರ್ಯನಿರ್ವಹಿಸುತ್ತಿವೆ.ಆದರೆ ಹೃದಯ ಸ್ಪಂದಿಸುತ್ತಿಲ್ಲ. ಅವರು ತುಂಬ ಸಮಯ ನಮ್ಮೊಂದಿಗೆ ಇರುತ್ತಾರೆ ಎನ್ನುವುದು ಅನುಮಾನವಾಗಿದೆ. ಚಿಕಿತ್ಸೆ ಮುಂದುವರಿಸಿದ್ದೇವೆ, ಆದರೆ ಅದಕ್ಕೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಕಡಿಮೆಯಾಗುತ್ತಿದೆ. ಅವರು ಚೇತರಿಸಿಕೊಳ್ಳುವ ಸಂಭವ ಬಹಳ ಕಡಿಮೆ. ಎಷ್ಟು ಸಮಯ, ಎಷ್ಟು ದಿನ ಎಂದು ಹೇಳಲು ಸಾಧ್ಯವಿಲ್ಲ. ಆರೋಗ್ಯ ತೀರಾ ಹದಗೆಟ್ಟಿದೆ’ ಎಂದಿದ್ದಾರೆ.