<p><strong>ಬೆಂಗಳೂರು:</strong> ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಸೋಮವಾರ ನಿಧನರಾದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.</p>.<p>ತಂದೆ ಕೆ.ಸಿ.ಎನ್.ಗೌಡರ ಮಾರ್ಗದರ್ಶನದಲ್ಲಿ ಚಲನಚಿತ್ರ ನಿರ್ಮಾಣ, ಪ್ರದರ್ಶನ, ಚಿತ್ರ ವಿತರಣೆಯಲ್ಲಿ ಅಪಾರ ಅನುಭವಗಳಿಸಿದ್ದರು. ಬೆಂಗಳೂರಿನ ನವರಂಗ್, ಊರ್ವಶಿ ಮತ್ತು ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರಮಂದಿರದ ಮಾಲೀಕರಾಗಿದ್ದರು.</p>.<p>ಐವತ್ತಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿದ್ದ ಇವರು ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.</p>.<p>ದಾರಿ ತಪ್ಪಿದ ಮಗ, ಹುಲಿಯ ಹಾಲಿನ ಮೇವು, ಬಬ್ರುವಾಹನ ಮತ್ತಿತರ ಚಿತ್ರಗಳನ್ನು ನಿರ್ಮಿಸಿದ್ದರು. ಸುಮಾರು 500 ಚಿತ್ರಗಳ ವಿತರಣೆ ಮಾಡಿದ್ದರು.</p>.<p>ಪನೋರಮಾ ವಿಭಾಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿ ತೀರ್ಪುಗಾರಾಗಿ, ಮುಂಬೈನ ಭಾರತೀಯ ಚಲನಚಿತ್ರ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಡಾ.ರಾಜ್ ಕುಮಾರ್ ಆಪ್ತ ವಲಯದಲ್ಲಿ ಇದ್ದ ಚಂದ್ರಶೇಖರ್, ಶೇಷಾದ್ರಿಪುರದ ಶಿಕ್ಷಣ ದತ್ತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತ ಸುಮಾರು ನೂರವೈತ್ತು ವಿದ್ಯಾರ್ಥಿಗಳಿಗೆ ಆಶ್ರಯವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಸೋಮವಾರ ನಿಧನರಾದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.</p>.<p>ತಂದೆ ಕೆ.ಸಿ.ಎನ್.ಗೌಡರ ಮಾರ್ಗದರ್ಶನದಲ್ಲಿ ಚಲನಚಿತ್ರ ನಿರ್ಮಾಣ, ಪ್ರದರ್ಶನ, ಚಿತ್ರ ವಿತರಣೆಯಲ್ಲಿ ಅಪಾರ ಅನುಭವಗಳಿಸಿದ್ದರು. ಬೆಂಗಳೂರಿನ ನವರಂಗ್, ಊರ್ವಶಿ ಮತ್ತು ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರಮಂದಿರದ ಮಾಲೀಕರಾಗಿದ್ದರು.</p>.<p>ಐವತ್ತಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿದ್ದ ಇವರು ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.</p>.<p>ದಾರಿ ತಪ್ಪಿದ ಮಗ, ಹುಲಿಯ ಹಾಲಿನ ಮೇವು, ಬಬ್ರುವಾಹನ ಮತ್ತಿತರ ಚಿತ್ರಗಳನ್ನು ನಿರ್ಮಿಸಿದ್ದರು. ಸುಮಾರು 500 ಚಿತ್ರಗಳ ವಿತರಣೆ ಮಾಡಿದ್ದರು.</p>.<p>ಪನೋರಮಾ ವಿಭಾಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿ ತೀರ್ಪುಗಾರಾಗಿ, ಮುಂಬೈನ ಭಾರತೀಯ ಚಲನಚಿತ್ರ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಡಾ.ರಾಜ್ ಕುಮಾರ್ ಆಪ್ತ ವಲಯದಲ್ಲಿ ಇದ್ದ ಚಂದ್ರಶೇಖರ್, ಶೇಷಾದ್ರಿಪುರದ ಶಿಕ್ಷಣ ದತ್ತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತ ಸುಮಾರು ನೂರವೈತ್ತು ವಿದ್ಯಾರ್ಥಿಗಳಿಗೆ ಆಶ್ರಯವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>