<p><strong>ತಿರುವನಂತಪುರ</strong>: ಮಲಯಾಳ ಚಿತ್ರರಂಗದ ಹಿರಿಯ ನಟ, ಬರಹಗಾರ, ನಿರ್ಮಾಪಕ ಶ್ರೀನಿವಾಸನ್ (69) ಅವರು ಶನಿವಾರ ನಿಧನರಾಗಿದ್ದಾರೆ. </p><p>ಶ್ರೀನಿವಾಸನ್ ಅವರು ಎರ್ನಾಕುಲಂ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.</p><p>1984ರಲ್ಲಿ ‘ಒಡರುತ್ತು ಅಮ್ಮಾವ ಆಲಾರಿಯಂ’ ಚಿತ್ರದ ಮೂಲಕ ಉತ್ತಮ ಬರಹಗಾರರಾಗಿ ಶ್ರೀನಿವಾಸನ್ ಗುರುತಿಸಿಕೊಂಡಿದ್ದರು. </p><p>ಶ್ರೀನಿವಾಸನ್ ಅವರು ತೀಕ್ಷ್ಣವಾದ ಸಾಮಾಜಿಕ ವ್ಯಾಖ್ಯಾನವನ್ನು ಸುಲಭವಾಗಿ ಅರ್ಥೈಸಬಹುದಾದ ನಿಟ್ಟಿನಲ್ಲಿ ಹಾಸ್ಯಮಯವಾಗಿ ಕಥೆಗಳನ್ನು ಹೆಣೆಯುವ ಮೂಲಕ ಮಲಯಾಳ ಚಿತ್ರರಂಗದಲ್ಲಿ ಗಮನ ಸೆಳೆದಿದ್ದರು.</p><p>ಹಾಸ್ಯ, ವಿಡಂಬನೆ ಮತ್ತು ದೈನಂದಿನ ವಾಸ್ತವಗಳ ತೀವ್ರ ಅರಿವಿನಿಂದ ಗುರುತಿಸಲ್ಪಟ್ಟ ಅವರ ಚಿತ್ರಕಥೆಗಳು ಪ್ರೇಕ್ಷಕರಿಗೆ ಹಾಸ್ಯದ ಹೊಸ ಭಾಷೆಯನ್ನು ನೀಡಿದ್ದವು. ಹಾಸ್ಯ ಮತ್ತು ವಿಮರ್ಶೆಯ ಮಿಶ್ರಣದ ಮೂಲಕ ಶ್ರೀನಿವಾಸನ್ ಅವರು ಅಳಿಸಲಾಗದ ಛಾಪು ಮೂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಮಲಯಾಳ ಚಿತ್ರರಂಗದ ಹಿರಿಯ ನಟ, ಬರಹಗಾರ, ನಿರ್ಮಾಪಕ ಶ್ರೀನಿವಾಸನ್ (69) ಅವರು ಶನಿವಾರ ನಿಧನರಾಗಿದ್ದಾರೆ. </p><p>ಶ್ರೀನಿವಾಸನ್ ಅವರು ಎರ್ನಾಕುಲಂ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.</p><p>1984ರಲ್ಲಿ ‘ಒಡರುತ್ತು ಅಮ್ಮಾವ ಆಲಾರಿಯಂ’ ಚಿತ್ರದ ಮೂಲಕ ಉತ್ತಮ ಬರಹಗಾರರಾಗಿ ಶ್ರೀನಿವಾಸನ್ ಗುರುತಿಸಿಕೊಂಡಿದ್ದರು. </p><p>ಶ್ರೀನಿವಾಸನ್ ಅವರು ತೀಕ್ಷ್ಣವಾದ ಸಾಮಾಜಿಕ ವ್ಯಾಖ್ಯಾನವನ್ನು ಸುಲಭವಾಗಿ ಅರ್ಥೈಸಬಹುದಾದ ನಿಟ್ಟಿನಲ್ಲಿ ಹಾಸ್ಯಮಯವಾಗಿ ಕಥೆಗಳನ್ನು ಹೆಣೆಯುವ ಮೂಲಕ ಮಲಯಾಳ ಚಿತ್ರರಂಗದಲ್ಲಿ ಗಮನ ಸೆಳೆದಿದ್ದರು.</p><p>ಹಾಸ್ಯ, ವಿಡಂಬನೆ ಮತ್ತು ದೈನಂದಿನ ವಾಸ್ತವಗಳ ತೀವ್ರ ಅರಿವಿನಿಂದ ಗುರುತಿಸಲ್ಪಟ್ಟ ಅವರ ಚಿತ್ರಕಥೆಗಳು ಪ್ರೇಕ್ಷಕರಿಗೆ ಹಾಸ್ಯದ ಹೊಸ ಭಾಷೆಯನ್ನು ನೀಡಿದ್ದವು. ಹಾಸ್ಯ ಮತ್ತು ವಿಮರ್ಶೆಯ ಮಿಶ್ರಣದ ಮೂಲಕ ಶ್ರೀನಿವಾಸನ್ ಅವರು ಅಳಿಸಲಾಗದ ಛಾಪು ಮೂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>