ಹೈದರಾಬಾದ್: ತೆಲುಗು ಚಿತ್ರರಂಗದ ಪ್ರಸಿದ್ಧ ಗೀತರಚನೆಕಾರ, ಪದ್ಮಶ್ರೀ ಪುರಸ್ಕೃತ ‘ಸಿರಿವೆನ್ನಲ’ ಸೀತಾರಾಮ ಶಾಸ್ತ್ರಿ (66) ಅವರು ಶ್ವಾಸಕೋಶ ಕ್ಯಾನ್ಸರ್ ಸಂಬಂಧಿತ ತೊಂದರೆಗಳಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ನ್ಯುಮೋನಿಯಾದಿಂದ ಬಳಲುತ್ತಿದ್ದರಿಂದ ಅವರನ್ನು ನ.24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.