ಚಿತ್ರದ ಬಹುಭಾಗದ ಚಿತ್ರೀಕರಣ ಉತ್ತರ ಕರ್ನಾಟದ ಭಾಗಗಳಲ್ಲೇ ನಡೆದಿದ್ದು, ಆ ಭಾಷಾ ಶೈಲಿಯಲ್ಲೇ ಚಿತ್ರ ಮೂಡಿಬಂದಿದೆ. ತಾರಾಗಣದಲ್ಲಿ ಬಿರಾದಾರ್ ಜೊತೆ ನೀತಾ ಮೈಂದರ್ಗಿ, ಪ್ರೀತು ಪೂಜಾ, ನಟ ಕರಿಸುಬ್ಬು, ಡೇರಿಂಗ್ ಸ್ಟಾರ್ ಧರ್ಮ, ಪ್ರಶಾಂತ್ ಸಿದ್ದಿ, ಅಭಯ್ ವೀರ್, ಆರ್.ಡಿ. ಬಾಬು, ವಿವೇಕ್ ಜಂಬಗಿ, ರುದ್ರಗೌಡ ಬಾದರದಿನ್ನಿ, ಮುರುಳಿ ಹೊಸಕೋಟೆ, ರಾಜೇಂದ್ರ ಗುಗ್ವಾಡ, ರವಿದೀಪ್, ಸಂತು ಸೊಕನಾದಗಿ, ಎಲ್ಐಸಿ ಲೋಕೇಶ್ ತೆರೆ ಹಂಚಿಕೊಂಡಿದ್ದಾರೆ.