ಈಗ ಕ್ಷಮೆ ಕೇಳಿದ ವಿಡಿಯೊ ಒಂದನ್ನು ಬಿಡುಗಡೆ ಮಾಡಿರುವ ರಂಗರಾಜು, ‘ವಿಷ್ಣು ದಾದಾ ಅವರ ಬಗ್ಗೆ ಮಾತನಾಡಿದ್ದು ತಪ್ಪು. ವಿಷ್ಣು ಅವರ ಕುಟುಂಬ, ನಟರಾದ ಪುನೀತ್ ರಾಜ್ಕುಮಾರ್, ಸುದೀಪ್ ಹಾಗೂ ವಿಷ್ಣು ಅವರ ಅಭಿಮಾನಿಗಳಲ್ಲಿ ಈ ಬಗ್ಗೆ ಕ್ಷಮೆ ಕೇಳುತ್ತೇನೆ. ಈ ತಪ್ಪಿಗೆ ಈಗಾಗಲೇ ಶಿಕ್ಷೆ ಅನುಭವಿಸುತ್ತಿದ್ದು, ಕೊರೊನಾದಿಂದ ಬಳಲುತ್ತಿದ್ದೇನೆ’ ಎಂದು ಅತ್ತಿದ್ದಾರೆ. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.