ಖಡ್ಗದಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿ ವಿವಾದಕ್ಕೊಳಗಾಗಿದ್ದ ತಮಿಳುನಟ ವಿಜಯ್ ಸೇತುಪತಿ ಬೇಷರತ್ ಆಗಿ ಕ್ಷಮೆಯಾಚಿಸಿದ್ದಾರೆ. ಸೇತುಪತಿ ಅವರು ಖಡ್ಗದಿಂದ ಕೇಕ್ ಕತ್ತರಿಸಿದ ದೃಶ್ಯಗಳು ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲ ಪೊಲೀಸರೂ ಕ್ರಮ ಕೈಗೊಳ್ಳಲು ಮುಂದಾಗಿದ್ದರು.