<p>ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಸಂಭ್ರಮದಿಂದ ಆಚರಿಸಿದ್ದಾರೆ. ಕಳೆದ ವರ್ಷ ದರ್ಶನ್ ಜತೆ ಸೇರಿ ಆಚರಣೆ ಮಾಡಿದ್ದರು. ಆದರೆ ಈ ವರ್ಷ ದರ್ಶನ್ ಜೈಲಿನಲ್ಲಿರುವುದರಿಂದ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿರುವ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.<p>ದರ್ಶನ್ ಅವರು ಬಹಳ ಪ್ರೀತಿಯಿಂದ ತಮ್ಮ ಫಾರ್ಮ್ ಹೌಸ್ನಲ್ಲಿ ಕುದುರೆಯನ್ನು ಸಾಕಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮೀ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. </p><p>ವಿಡಿಯೊಗೆ ಅಡಿಬರಹವನ್ನು ಹಾಕಿರುವ ಅವರು ‘ನೀವು ಯಾರು ಎನ್ನುವುದನ್ನು ಪ್ರಾಣಿಗಳ ಕಣ್ಣುಗಳಲ್ಲಿ ಕಾಣಬಹುದು’ ಎಂದು ಹೇಳಿದ್ದಾರೆ. ಹಸುಗಳಿಗೆ ಪೂಜೆ ಸಲ್ಲಿಸಿರುವ ಫೋಟೊಗಳನ್ನು ಹಂಚಿಕೊಂಡು ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.</p><p>ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. </p><p>2025ರ ಡಿ.11ರಂದು ದರ್ಶನ್ ಅಭಿನಯದ ಡೆವಿಲ್ ಚಿತ್ರ ತೆರೆಕಂಡು, ಯಶಸ್ವಿ ಪ್ರದರ್ಶನಗೊಂಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಸಂಭ್ರಮದಿಂದ ಆಚರಿಸಿದ್ದಾರೆ. ಕಳೆದ ವರ್ಷ ದರ್ಶನ್ ಜತೆ ಸೇರಿ ಆಚರಣೆ ಮಾಡಿದ್ದರು. ಆದರೆ ಈ ವರ್ಷ ದರ್ಶನ್ ಜೈಲಿನಲ್ಲಿರುವುದರಿಂದ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿರುವ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.<p>ದರ್ಶನ್ ಅವರು ಬಹಳ ಪ್ರೀತಿಯಿಂದ ತಮ್ಮ ಫಾರ್ಮ್ ಹೌಸ್ನಲ್ಲಿ ಕುದುರೆಯನ್ನು ಸಾಕಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮೀ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. </p><p>ವಿಡಿಯೊಗೆ ಅಡಿಬರಹವನ್ನು ಹಾಕಿರುವ ಅವರು ‘ನೀವು ಯಾರು ಎನ್ನುವುದನ್ನು ಪ್ರಾಣಿಗಳ ಕಣ್ಣುಗಳಲ್ಲಿ ಕಾಣಬಹುದು’ ಎಂದು ಹೇಳಿದ್ದಾರೆ. ಹಸುಗಳಿಗೆ ಪೂಜೆ ಸಲ್ಲಿಸಿರುವ ಫೋಟೊಗಳನ್ನು ಹಂಚಿಕೊಂಡು ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.</p><p>ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. </p><p>2025ರ ಡಿ.11ರಂದು ದರ್ಶನ್ ಅಭಿನಯದ ಡೆವಿಲ್ ಚಿತ್ರ ತೆರೆಕಂಡು, ಯಶಸ್ವಿ ಪ್ರದರ್ಶನಗೊಂಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>