<p>ತಮಿಳಿನ ಜನಪ್ರಿಯ ನಟ ‘ಚಿಯಾನ್’ ವಿಕ್ರಮ್ ಅಭಿನಯದ ‘ವೀರ ಧೀರ ಶೂರನ್ -2’ ಚಿತ್ರ ಮಾ.27 ರಂದು ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರಕ್ಕಾಗಿ ಇತ್ತೀಚೆಗೆ ವಿಕ್ರಮ್ ಬೆಂಗಳೂರಿಗೆ ಬಂದಿದ್ದರು. ಚಿತ್ರವನ್ನು ಅರುಣ್ ಕುಮಾರ್ ಬರೆದು, ನಿರ್ದೇಶಿಸಿದ್ದಾರೆ. ರಿಯಾ ಶಿಭು ನಿರ್ಮಾಣವಿದೆ.</p>.<p>‘ನನ್ನ ಹಿಂದಿನ ಹಲವು ಚಿತ್ರಗಳ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ನನಗೆ ಒಳ್ಳೆಯ ಗೆಳೆಯರಿದ್ದಾರೆ. ‘ಕೆಜಿಎಫ್’, ‘ಕಾಂತಾರ’ ಚಿತ್ರಗಳ ಅಭಿಮಾನಿ. ‘ವೀರ ಧೀರ...’ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಎರಡನೇ ಭಾಗ ಈಗ ತೆರೆಗೆ ಬರುತ್ತಿದೆ. ಆ ನಂತರ ಮೊದಲ ಭಾಗ ಬರಲಿದೆ. ಇದೊಂದು ಮಾಸ್ ಚಿತ್ರ. ಅಷ್ಟೇ ನೈಜವಾಗಿಯೂ ಇದೆ. ಕಥೆಯಲ್ಲಿ ಸಾಕಷ್ಟು ವಿಷಯಗಳಿವೆ. ಅದರಲ್ಲೂ ಫ್ಲಾಶ್ಬ್ಯಾಕ್ ದೃಶ್ಯಗಳು ಬಹಳ ಆಸಕ್ತಿದಾಯಕವಾಗಿವೆ’ ಎಂದರು ವಿಕ್ರಮ್.</p>.<p>ಕನ್ನಡದ ನಟ ರಮೇಶ್ ಇಂದಿರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದುಶಾರ ವಿಜಯನ್, ಎಸ್.ಜೆ. ಸೂರ್ಯ, ಸೂರಜ್ ವೆಂಜಾರಮೂಡು ಮುಂತಾದವರು ಚಿತ್ರದಲ್ಲಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ, ತೇನಿ ಈಶ್ವರ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಮಿಳಿನ ಜನಪ್ರಿಯ ನಟ ‘ಚಿಯಾನ್’ ವಿಕ್ರಮ್ ಅಭಿನಯದ ‘ವೀರ ಧೀರ ಶೂರನ್ -2’ ಚಿತ್ರ ಮಾ.27 ರಂದು ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರಕ್ಕಾಗಿ ಇತ್ತೀಚೆಗೆ ವಿಕ್ರಮ್ ಬೆಂಗಳೂರಿಗೆ ಬಂದಿದ್ದರು. ಚಿತ್ರವನ್ನು ಅರುಣ್ ಕುಮಾರ್ ಬರೆದು, ನಿರ್ದೇಶಿಸಿದ್ದಾರೆ. ರಿಯಾ ಶಿಭು ನಿರ್ಮಾಣವಿದೆ.</p>.<p>‘ನನ್ನ ಹಿಂದಿನ ಹಲವು ಚಿತ್ರಗಳ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ನನಗೆ ಒಳ್ಳೆಯ ಗೆಳೆಯರಿದ್ದಾರೆ. ‘ಕೆಜಿಎಫ್’, ‘ಕಾಂತಾರ’ ಚಿತ್ರಗಳ ಅಭಿಮಾನಿ. ‘ವೀರ ಧೀರ...’ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಎರಡನೇ ಭಾಗ ಈಗ ತೆರೆಗೆ ಬರುತ್ತಿದೆ. ಆ ನಂತರ ಮೊದಲ ಭಾಗ ಬರಲಿದೆ. ಇದೊಂದು ಮಾಸ್ ಚಿತ್ರ. ಅಷ್ಟೇ ನೈಜವಾಗಿಯೂ ಇದೆ. ಕಥೆಯಲ್ಲಿ ಸಾಕಷ್ಟು ವಿಷಯಗಳಿವೆ. ಅದರಲ್ಲೂ ಫ್ಲಾಶ್ಬ್ಯಾಕ್ ದೃಶ್ಯಗಳು ಬಹಳ ಆಸಕ್ತಿದಾಯಕವಾಗಿವೆ’ ಎಂದರು ವಿಕ್ರಮ್.</p>.<p>ಕನ್ನಡದ ನಟ ರಮೇಶ್ ಇಂದಿರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದುಶಾರ ವಿಜಯನ್, ಎಸ್.ಜೆ. ಸೂರ್ಯ, ಸೂರಜ್ ವೆಂಜಾರಮೂಡು ಮುಂತಾದವರು ಚಿತ್ರದಲ್ಲಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ, ತೇನಿ ಈಶ್ವರ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>