ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿಯಾದ ನಟ ಸುದೀಪ್: ಹಲವು ವಿಚಾರಗಳ ಬಗ್ಗೆ ಚರ್ಚೆ

ಅಕ್ಷರ ಗಾತ್ರ

ನವದೆಹಲಿ: ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ನಟನೆಯ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ಬಿಡುಗಡೆಗೆ ಸಜ್ಜಾಗಿದೆ.

ಜುಲೈ 28ರಂದು ವಿಶ್ವದಾದ್ಯಂತ ‘ವಿಕ್ರಾಂತ್‌ ರೋಣ’ ಸಿನಿಮಾ 3ಡಿಯಲ್ಲಿ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ಜೊತೆ ಕಿಚ್ಚ ಸುದೀಪ್ ಕೂಡ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಸದ್ಯ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸುದೀಪ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆ.

ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರೊಂದಿಗೆ ಉಪಹಾರ ಸೇವಿಸಿದ್ದಾರೆ. ಆ ಬಳಿಕ ‘ವಿಕ್ರಾಂತ್‌ ರೋಣ’ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ.

‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್​ ಅವರು ಭೇಟಿ ನೀಡಿ ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದು ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.

‘ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರು ಚಿತ್ರರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ’ ಎಂದು ಜೋಶಿ ತಿಳಿಸಿದ್ದಾರೆ.

ಅನೂಪ್‌ ಭಂಡಾರಿ ನಿರ್ದೇಶನದ ‘ವಿಕ್ರಾಂತ್‌ ರೋಣ’ ಸಿನಿಮಾ ಹಿಂದಿ, ಮಲಯಾಳಂ, ತೆಲುಗು, ತಮಿಳು ಹಾಗೂ ಇಂಗ್ಲಿಷ್‌ನಲ್ಲಿ ಡಬ್‌ ಆಗಿದೆ. ಬಾಲಿವುಡ್‌ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT