ದೆಹಲಿಯಲ್ಲಿ ಜು.28 ಗುರುವಾರ ಬೆಳಿಗ್ಗೆ ಚಾಣಕ್ಯಪುರಿಯ ಪಿವಿಆರ್ ಥಿಯೇಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರಿಗೆ ಆಹ್ವಾನ ಹೋಗಿದ್ದು ಅವರು ಮಾಹಿತಿ ಹಂಚಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯಸಭಾ ಸದಸ್ಯರಿಗೆ, ಲೋಕಸಭಾ ಸದಸ್ಯರಿಗೆ ಹಾಗೂ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಆಹ್ವಾನ ಹೋಗಿದ್ದು, ಕನ್ನಡದ ವಿಕ್ರಾಂತ್ ರೋಣ ಸಿನಿಮಾವನ್ನು ಅವರಿಗೆ ತೋರಿಸಲಾಗುತ್ತದೆ.