<p><strong>ಬೆಂಗಳೂರು: </strong>14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗುರುವಾರ ಮುಕ್ತಾಯಗೊಂಡಿದ್ದು, ವಿರಾಟಪುರ ವಿರಾಗಿ, ಕೋಳಿ ಎಸ್ರು ಸಹಿತ ಕನ್ನಡದ ಐದು ಚಿತ್ರಗಳು ಪ್ರಶಸ್ತಿಗೆ ಭಾಜನವಾಗಿವೆ.</p>.<p>14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಡೆಯಿತು. </p>.<p>ಏಷ್ಯನ್ ವಿಭಾಗದಲ್ಲಿ ‘ವಿರಾಟಪುರ ವಿರಾಗಿ’(ನಿರ್ದೇಶಕ ಬಿ.ಎಸ್.ಲಿಂಗದೇವರು) ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದು ಕೊಂಡಿದ್ದು, ಚಿತ್ರಭಾರತಿ ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ‘ಕೋಳಿ ಎಸ್ರು’(ನಿರ್ದೇಶಕಿ ಚಂಪಾ ಶೆಟ್ಟಿ) ಅತ್ಯುತ್ತಮ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p>.<p>ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಚಿತ್ರವಾಗಿ ‘ನಾನು ಕುಸುಮ’(ನಿರ್ದೇಶಕ ಕೃಷ್ಣೇಗೌಡ) ಪ್ರಶಸ್ತಿ ಗಳಿಸಿದರೆ, ‘ಹದಿನೇಳೆಂಟು’ (ಪೃಥ್ವಿ ಕೊಣನೂರು) ದ್ವಿತೀಯ ಹಾಗೂ ‘ಫೋಟೋ’ (ಉತ್ಸವ್ ಗೋನಾವರ್) ತೃತೀಯ ಸ್ಥಾನವನ್ನು ಪಡೆದುಕೊಂಡಿವೆ.</p>.<p>ಸಮಾರಂಭದಲ್ಲಿ ಪೋಷಕ ನಟ ದೊಡ್ಡಣ್ಣ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ನಿರ್ದೇಶಕರಾದ ಡಿ.ಪಿ.ಮುರಳಿಧರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ನರಹರಿ ರಾವ್ ವೇದಿಕೆಯಲ್ಲಿದ್ದು ಪ್ರಶಸ್ತಿ ವಿತರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗುರುವಾರ ಮುಕ್ತಾಯಗೊಂಡಿದ್ದು, ವಿರಾಟಪುರ ವಿರಾಗಿ, ಕೋಳಿ ಎಸ್ರು ಸಹಿತ ಕನ್ನಡದ ಐದು ಚಿತ್ರಗಳು ಪ್ರಶಸ್ತಿಗೆ ಭಾಜನವಾಗಿವೆ.</p>.<p>14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಡೆಯಿತು. </p>.<p>ಏಷ್ಯನ್ ವಿಭಾಗದಲ್ಲಿ ‘ವಿರಾಟಪುರ ವಿರಾಗಿ’(ನಿರ್ದೇಶಕ ಬಿ.ಎಸ್.ಲಿಂಗದೇವರು) ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದು ಕೊಂಡಿದ್ದು, ಚಿತ್ರಭಾರತಿ ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ‘ಕೋಳಿ ಎಸ್ರು’(ನಿರ್ದೇಶಕಿ ಚಂಪಾ ಶೆಟ್ಟಿ) ಅತ್ಯುತ್ತಮ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p>.<p>ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಚಿತ್ರವಾಗಿ ‘ನಾನು ಕುಸುಮ’(ನಿರ್ದೇಶಕ ಕೃಷ್ಣೇಗೌಡ) ಪ್ರಶಸ್ತಿ ಗಳಿಸಿದರೆ, ‘ಹದಿನೇಳೆಂಟು’ (ಪೃಥ್ವಿ ಕೊಣನೂರು) ದ್ವಿತೀಯ ಹಾಗೂ ‘ಫೋಟೋ’ (ಉತ್ಸವ್ ಗೋನಾವರ್) ತೃತೀಯ ಸ್ಥಾನವನ್ನು ಪಡೆದುಕೊಂಡಿವೆ.</p>.<p>ಸಮಾರಂಭದಲ್ಲಿ ಪೋಷಕ ನಟ ದೊಡ್ಡಣ್ಣ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ನಿರ್ದೇಶಕರಾದ ಡಿ.ಪಿ.ಮುರಳಿಧರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ನರಹರಿ ರಾವ್ ವೇದಿಕೆಯಲ್ಲಿದ್ದು ಪ್ರಶಸ್ತಿ ವಿತರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>